4:28 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆ ನೋಟಿಸ್: ಭೂಮಿಯ ಹಕ್ಕು ಉಳಿಸಿಕೊಳ್ಳಲು ರೈತರ ಸಭೆಯಲ್ಲಿ ತೀರ್ಮಾನ

11/12/2024, 12:38

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮುತ್ತಕಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತರ ಸಭೆಯಲ್ಲಿ ರೈತರು ಕಾನೂನು ಬದ್ದವಾಗಿ ಭೂಮಿಯ ಹಕ್ಕು ಪಡೆದು ಮೂರು ನಾಲ್ಕು ದಶಕಗಳಿಂದ ಅನುಭವ ದಲ್ಲಿರುವ ಭೂಮಿಗೆ ಅರಣ್ಯ ಇಲಾಖೆಯವರು ನೋಟೀಸ್ ಜಾರಿ ಮಾಡಿರುವುದನ್ನು ವಿರೋಧಿಸಿ ಮುತ್ತಕಪಲ್ಲಿ,
ಪಾತೂರು,ಕಾರಂಗೀ, ಗಂಗನತ್ತ, ಎಮ್ಮನೂರು, ಚನ್ನಯ್ಯಗಾರಿಪಲ್ಲಿ ರೈತರು ತಮ್ಮ ಭೂಮಿಯ ಹಕ್ಕು ಉಳಿಸಿಕೊಳ್ಳಲು ಸಭೆಯಲ್ಲಿ ತೀರ್ಮಾನಿಸಲಾಯಿತು.
ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಪಿ.ಆರ್.ಸೂರಿ ಮಾತನಾಡಿ ಕೋಲಾರ ಜಿಲ್ಲೆಯ ಅರಣ್ಯ ಅಧಿಕಾರಿಗಳು ರಾಜ್ಯ ಸರ್ಕಾರದ ಇತ್ತೀಚಿನ ಆದೇಶಗಳಾದ ಜಂಟಿ ಸರ್ವೆ ಆಗುವ ತನಕ ಮತ್ತು ಮೂರು ಎಕರೆ ಒಳಗಿನ ಒತ್ತುವರಿ ರೈತರಿಗೆ ಯಾವುದೇ ಕಾರಣಕ್ಕೂ ತೆರುವು ಮಾಡಬಾರದನ್ನುವ ಕಾನೂನನ್ನು ಉಲ್ಲಂಘನೆ ಮಾಡಿ ರೈತರಿಗೆ ನೋಟೀಸ್ ಜಾರಿ ಮಾಡಿರುವುದನ್ನು ಖಂಡಿಸಿದರು.
ಇಲ್ಲಿನ ರೈತರು ಅರಣ್ಯಕ್ಕೆ ಹೋಗಿಲ್ಲ. ಬದಲಿಗೆ ಅರಣ್ಯ ಇಲಾಖೆಯವರೆ ಕಾನೂನು ಬಾಹಿರವಾಗಿ ನಕ್ಷೆ ತಯಾರಿಸಿಕೊಂಡು ರೈತರಿಗೆ ತೊಂದರೆ ಕೊಡುತ್ತಿದ್ದಾರೆ. ರೈತರ ಭೂಮಿ ಮೊದಲಿಗೆ ಸರ್ಕಾರದ ಕಂದಾಯ ಭೂಮಿ ಗೋಮಾಳವಾಗಿದ್ದರಿಂದ ಸರ್ಕಾರ ಕಾನೂನು ಬದ್ದವಾಗಿ ರೈತರ ಹೆಸರಿಗೆ ಮಂಜೂರು ಮಾಡಲಾಗಿದೆ. ಅರಣ್ಯ ಇಲಾಖೆಯವರ ದೌರ್ಜನ್ಯಕ್ಕೆ ರೈತರು ಹೆದರಬಾರದು ಸಂಘಟಿತ ಹೋರಾಟ ನಡೆಸಬೇಕೆಂದು ತಿಳಿಸಿದರು.
ರೈತ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪಾತಕೋಟ ನವೀನ್ ಕುಮಾರ್ ಮಾತನಾಡಿ ಇಡೀ ರಾಜ್ಯದಲ್ಲಿ ಅರಣ್ಯ ಭೂಮಿ, ಬಗರ್ ಹುಕ್ಕುಂ ಸಾಗುವಳಿ ಸಕ್ರಮ, ರೈತವಿರೋಧಿ ಭೂಸ್ವಾಧೀನ ಪ್ರಶ್ನೆಗಳ ಪರಿಹಾರಕ್ಕೆ ಮುಂದಿನ ತಿಂಗಳು ಬೆಂಗಳೂರಿಗೆ ರೈತರ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ. ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಲು ಹೇಳಿದರು.
ಭೂಮಿ ಹೋರಾಟ ಸಮಿತಿ ಕಾರ್ಯದರ್ಶಿ ಸೈಯದ್ ಫಾರೂಖ್ ಮಾತನಾಡಿ ಜಿಲ್ಲೆಯಲ್ಲಿ ಭೂಮಿ ಕಳೆದುಕೊಂಡ ಸಾವಿರಾರು ರೈತರ ಬಗ್ಗೆ ಎಂದು ಬಾಯಿ ಬಿಚ್ಚಿದ ರೈತ ನಾಯಕ ರೊಬ್ಬರು ಅರಣ್ಯ ಇಲಾಖೆ ಪರ ವಕಾಲತ್ತು ವಹಿಸಿ ಮಾತನಾಡುವುದು ರೈತ ಕುಲಕ್ಕೆ ಬಗೆದ ದ್ರೋಹವಾಗಿದೆ ಎಂದರು.
ಮುಖಂಡರಾದ ವೆಂಕಟ್ರಾಮ ರೆಡ್ಡಿ, ಚಂದ್ರಶೇಖರ ರೆಡ್ಡಿ, ಶ್ರೀನಿವಾಸರೆಡ್ಡಿ, ಮುತ್ತಕಪಲ್ಲಿ ಹನುಮಪ್ಪ, ಯಮ್ಮನೂರು ನಾಗರಾಜ್, ರಾಮಕೃಷ್ಣಪ್ಪ, ಮುಜಾಮಿಲ್, ಗಂಗನತ್ತ ಪೆದ್ದನಾರಾಯಣಪ್ಪ,ಪೆದ್ದಣ್ಣ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು