5:48 PM Monday9 - February 2026
ಬ್ರೇಕಿಂಗ್ ನ್ಯೂಸ್
ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ*

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆ ನಡುರಾತ್ರಿ ಕಾರ್ಯಾಚರಣೆ: ಕಾಡಾನೆ ಸೆರೆ; ಇಬ್ಬರ ಬಲಿ ಪಡೆದ ಕಿಲ್ಲರ್ ಸಲಗವೇ ಇದು?

16/11/2023, 11:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ಎರಡು ತಿಂಗಳ ಅವಧಿಯೊಳಗೆ ಇಬ್ಬರನ್ನು ಬಲಿ ಪಡೆದ ಕಾಡಾನೆಯನ್ನು ಕುಂದೂರು ಸಮೀಪ ಸೆರೆ ಹಿಡಿಯಲಾಗಿದೆ. ಆದರೆ ಸೆರೆ ಹಿಡಿಯಲಾದ ಕಾಡಾನೆ ಕಿಲ್ಲರ್ ಸಲಗವಲ್ಲ ಎಂಬ ವದಂತಿಯೂ ಇದೆ.

HEFI ON 16.11


ಅರಣ್ಯ ಇಲಾಖೆ ಸಿಬ್ಬಂದಿಗಳು ಸಾಕು ಅನೆಯ ಮೂಲಕ ನಿನ್ನೆ ಮಧ್ಯಾಹ್ನದಿಂದ ಕಾರ್ಯಾಚರಣೆ ಆರಂಭಿಸಿದ್ದರು. ತಡರಾತ್ರಿವರೆಗೂ ಕಾರ್ಯಾಚರಣೆ ನಡೆಸಿ ಕಾಡಾನೆಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಕುಂದೂರು ಸಮೀಪ ಕಾಡಾನೆಗೆ ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿಯಲಾಯಿತು.ಆದರೆ ಕಿಲ್ಲರ್ ಸಲಗ ಬಿಟ್ಟು ಬೇರೆ ಸಲಗವನ್ನು ಸೆರೆ ಹಿಡಿಯಲಾಗಿದೆ ಎಂಬ ವದಂತಿ ಹಬ್ಬಿದೆ. ಸೆರೆಯಾದ ಕಾಡಾನೆ ಯಾವುದು ಅಂತ ಅರಣ್ಯ ಇಲಾಖೆ ಸ್ಪಷ್ಟನೆ ನೀಡಿಲ್ಲ. ಇತ್ತೀಚೆಗೆ ಮಹಿಳೆಯೊಬ್ಬರು ಕಾಡಾನೆಗೆ ಬಲಿಯಾದ ಬಳಿಕ ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ಕಾರ್ಯಾಚರಣೆ ನಡೆಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು