12:05 AM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅರಣ್ಯ ಇಲಾಖೆಯ ಮಹಿಳಾ ಅಧಿಕಾರಿ ವರ್ಗಾವಣೆ: ವಿಜಿಲೆನ್ಸ್ ಕಮಿಟಿಯಿಂದ ಸೂಕ್ತ ತನಿಖೆಗೆ ಮಾಜಿ ಸಚಿವ ಖಾದರ್ ಒತ್ತಾಯ

29/01/2022, 22:40

ಮಂಗಳೂರು(reporterkarnataka.com): ರಕ್ಷಿತಾರಣ್ಯದಿಂದ ಯಾವುದೇ ಭಯವಿಲ್ಲದೇ ಮರ ಕಡಿದುಕೊಂಡು ಹೋದವರನ್ನು ತಡೆಯಲು ಯತ್ನಿಸಿದ ಅಧಿಕಾರಿಯನ್ನೇ ವರ್ಗಾವಣೆ ಮಾಡಿರುವುದು ಅತ್ಯಂತ ಗಂಭೀರವಾದ ವಿಚಾರ. ಈ ಬಗ್ಗೆ ರಾಜ್ಯ ಸರಕಾರಕ್ಕೆ ಪತ್ರ ಬರೆದು ವಿಜಿಲೆನ್ಸ್ ಕಮಿಟಿಯಿಂದ ಸಂಪೂರ್ಣವಾಗಿ ತನಿಖೆ ಮಾಡಬೇಕೆಂದು ಆಗ್ರಹಿಸುತ್ತೇನೆ ಎಂದು ಶಾಸಕ ಯು.ಟಿ.ಖಾದರ್ ಹೇಳಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಿಸರ್ವ್ ಫಾರೆಸ್ಟ್ ನಿಂದ ವ್ಯಕ್ತಿಯೋರ್ವರು ನೂರಾರು ಮರ ಕಡಿದು ಸಾಗಿಸುತ್ತಿರುವಾಗ ವಾಹನಕ್ಕೆ ಮುಟ್ಟುಗೋಲು ಹಾಕಲಾಗಿದೆ. ಈ ಸಂದರ್ಭ ಆತನ ಬಿಡುಗಡೆಗೆ ರಾಜಕೀಯ ಒತ್ತಡ ತಂದಾಗ, ಬಿಡುಗಡೆ ಮಾಡದ ವಲಯ ಅರಣ್ಯಾಧಿಕಾರಿಯನ್ನು ವರ್ಗಾವಣೆ ಮಾಡಿರುವ ಮಾಹಿತಿ ಇದೆ. ರಿಸರ್ವ್ ಫಾರೆಸ್ಟ್ ನಿಂದ ಒಬ್ಬರು ಯಾವುದೇ ಭಯವಿಲ್ಲದೇ ಮರ ಕಡಿದುಕೊಂಡು ಹೋಗುತ್ತಾರೆ, ಅದನ್ನು ತಡೆಯಲು ಯತ್ನಿಸಿದ ಅಧಿಕಾರಿಯನ್ನು ವರ್ಗಾವಣೆ ಮಾಡುತ್ತಾರೆ ಅಂದ್ರೆ ಇದು ಬಹಳ ಗಂಭೀರವಾದ ವಿಚಾರ. ಈ ಬಗ್ಗೆ ರಾಜ್ಯ ಅರಣ್ಯ ವಿಜಿಲೆನ್ಸ್ ಸ್ಕ್ಯಾಡ್ ನಿಂದ ಸೂಕ್ತ ತನಿಖೆಗೆ ಆಗ್ರಹಿಸಿ ಪತ್ರ ಬರೆಯುವುದಾಗಿ ಖಾದರ್ ನುಡಿದರು.

ಉಡುಪಿ ಅರಣ್ಯ ಸಂಚಾರಿ ದಳದಲ್ಲಿ ವಲಯ ಅರಣ್ಯಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಸಂಧ್ಯಾ ಎಂಬವರನ್ನು ಶಾಸಕ ಹರೀಶ್ ಪೂಂಜ, ವಿನಾಕಾರಣ ರಾಜಕೀಯ ದ್ವೇಷದಿಂದ ಬೀದರ್ ಗೆ ವರ್ಗಾಯಿಸಿರುವ ಬಗ್ಗೆ ಆರೋಪವಿದೆ. ಈ ಸಂಬಂಧ ಅಧಿಕಾರಿ ಸಂಧ್ಯಾ ಬಿಲ್ಲವ ಸಂಘಕ್ಕೆ ದೂರು ನೀಡಿರುವ ಪ್ರತಿ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದ್ದು, `ತಾಲೂಕಿನ ಅಕ್ರಮ ಮರಗಳ ಸಾಗಾಟಗಾರರ ಮರಮಟ್ಟು ಹಾಗೂ ವಾಹನ ಇಲಾಖೆ ವಶಪಡಿಸಿದೆ. ಮೇಲಿನ ಅಧಿಕಾರಿಗಳ ಆದೇಶದ ಮೇರೆಗೆ ಅಕ್ರಮ ಮರ ದಾಸ್ತಾನುಗಳಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿದ್ದೇನೆ. ಆದರೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ವೈಯಕ್ತಿಕ ದ್ವೇಷದಿಂದ, ಅಕ್ರಮ ಮರಗಳ್ಳರಿಗೆ ಅನುಕೂಲ ಮಾಡಿಕೊಡುವ ಎದ್ದೇಶದಿಂದ ದ ಬೀದರ್ ಗೆ

ವರ್ಗಾಯಿಸಿರುತ್ತಾರೆ’ ಎಂಬುದಾಗಿ ಆರೋಪಿಸಿದ್ದು, ನ್ಯಾಯ ನೀಡುವಂತೆ ಕೋರಿದ್ದಾರೆ. ಇದರೊಂದಿಗೆ ಅಧಿಕಾರಿಯನ್ನು ವರ್ಗಾವಣೆ ಮಾಡುವಂತೆ ಕೋರಿ ಶಾಸಕ ಹರೀಶ್ ಪೂಂಜ ಸಿಎಂಗೆ ಬರೆದ ಪತ್ರ ಕೂಡ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು