10:43 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಅರಣ್ಯ ಒತ್ತುವರಿ ತೆರವು: ತೀರ್ಥಹಳ್ಳಿಯಲ್ಲಿ ಆಗಸ್ಟ್ 19ರಂದು ಬೃಹತ್ ಪ್ರತಿಭಟನೆ

14/08/2024, 17:46

ರಶ್ಮಿ ಶ್ರೀಕಾಂತ್ ನಾಯಕ್ ತೀರ್ಥಹಳ್ಳಿ ಶಿವಮೊಗ್ಗ

info.reporterkarnataka@gmail.com

ಈಗಾಗಲೇ ಅರಣ್ಯ ಒತ್ತುವರಿ ತೆರವು ಬಗ್ಗೆ ನಾವೆಲ್ಲರೂ ಸಭೆ ನಡೆಸಿದ್ದೇವೆ. ಅದೊಂದು ಅವೈಜ್ಞಾನಿಕ ಒತ್ತುವರಿ ತೆರವು ಪ್ರಕ್ರಿಯೆ ಆಗಿದೆ. ಈ ಕಾರಣಕ್ಕೆ ಆಗಸ್ಟ್ 19ಕ್ಕೆ ಬೃಹತ್ ಪ್ರತಿಭಟನೆ ನಡೆಸಲಿದ್ದೇವೆ ಎಂದು ರೈತ ಸಂಘದ ಮುಖಂಡರಾದ ಕಂಬಳಿಗೆರೆ ರಾಜೇಂದ್ರ ಹೇಳಿದರು.
ಬುಧವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಅವೈಜ್ಞಾನಿಕ ಒತ್ತುವರಿ ತೆರವು ಖಂಡಿಸಿ 19ರಂದು ಪಕ್ಷಾತೀತವಾಗಿ ಪ್ರತಿಭಟನೆ ನಡೆಯಲಿದೆ. ಈ ಪ್ರತಿಭಟನೆಗೆ ರೈತ ಸಂಘ, ಸಮಾನ ಮನಸ್ಕರು, ಕರ್ನಾಟಕ ರಕ್ಷಣಾ ವೇದಿಕೆ, ದಲಿತ ಸಂಘರ್ಷ ಸಮಿತಿ ಸೇರಿ ಹಲವು ಸಂಘಟನೆಗಳು ಭಾಗಿಯಾಗಲಿವೆ ಎಂದರು.
ತೀರ್ಥಹಳ್ಳಿಯ ವಿಚಾರಗಳನ್ನು ರಾಜ್ಯದ ಪ್ರತಿಯೊಬ್ಬರು ಗಮನವಿಟ್ಟು ನೋಡುತ್ತಾರೆ. ಹಾಗಾಗಿ ಈ ಪ್ರತಿಭಟನೆ ಮಹತ್ವದ್ದಾಗಿದೆ. ಇಲ್ಲಿ
ಯಾರು ಬೇರೆ ಕಡೆಯಿಂದ ಬಂದು ವಲಸೆ ಸಾಗುವಳಿ ಮಾಡಿದವರಲ್ಲ, ಇಲ್ಲಿ ಇದ್ದಂತಹವರೇ ಸಾಗುವಳಿ ಮಾಡಿ ಬೆಳೆ ಬೆಳೆದವರು. ಅಂತವರ ಭೂಮಿಯನ್ನು ತೆರವು ಮಾಡುವುದು ಸರಿಯಲ್ಲ.
ಅರಣ್ಯ ಇಲಾಖೆಯವರೇ ಒತ್ತುವರಿ ಮಾಡುತ್ತಾರೆ.
ಇಲ್ಲಿನ ಜನರಿಗೆ ರಸ್ತೆ, ಮನೆ, ಕುಡಿಯಲು ನೀರಿನ ವ್ಯವಸ್ಥೆ, ಅದಕ್ಕೂ ಮೀರಿ ಮತದಾನದ ಹಕ್ಕು ಕೊಡುತ್ತಾರೆ. ಇದೆಲ್ಲಾ ಆದ ಮೇಲೆ ಕಟ್ಟಿಕೊಂಡ ಮನೆ ಒತ್ತುವರಿ ಜಾಗ ಎಂದು ಹೇಳುತ್ತಾರೆ. ಇದರಲ್ಲಿ ನ್ಯಾಯ ಎಲ್ಲಿದೆ? ಎಂದು ಪ್ರಶ್ನೆ ಮಾಡಿದರು.
ಕಾಡನ್ನು ಕಡಿದು ಎಂಪಿಎಂ ಕಾರ್ಖಾನೆ ಮಾಡಿದ್ದಾರೆ. ಅಂತಹ ಎಷ್ಟೋ ಕಾಡುಗಳನ್ನು ಕಡಿದಿದ್ದಾರೆ. ಮೊದಲು ಅಂತಹ ಜಾಗದಲ್ಲಿ ಕಾಡನ್ನು ಬೆಳಸಿ. ಅದನ್ನು ಬಿಟ್ಟು ಒತ್ತುವರಿ ಜಾಗವನ್ನು ಒತ್ತಾಯ ಪೂರ್ವಕವಾಗಿ ತೆರವು ಮಾಡುವುದು ಸರಿಯಲ್ಲ. ಲೇಔಟ್ ಹಾಗೂ ನೂರಾರು ಎಕರೆ ಒತ್ತುವರಿ ಮಾಡಿದವರನ್ನು ಕೇಳುವುದಿಲ್ಲ. ಆದರೆ ರೈತರ ಸಮಸ್ಯೆಯನ್ನು ಸರ್ಕಾರ ಸರಿಪಡಿಸುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಕೋಡ್ಲು ವೆಂಕಟೇಶ್, ಹೋರಬೈಲು ರಾಮಕೃಷ್ಣ, ನೆಂಪೆ ದೇವರಾಜ್, ಶಿವಾನಂದ ಕರ್ಕಿ, ನಿಶ್ಚಲ್ ಜಾದೂಗಾರ್, ಅಭಿಲಾಷ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು