11:08 AM Tuesday11 - August 2026
ಬ್ರೇಕಿಂಗ್ ನ್ಯೂಸ್
Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್… ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ…

ಇತ್ತೀಚಿನ ಸುದ್ದಿ

ಅರಣ್ಯಾಧಿಕಾರಿಗೆ ಅವಾಚ್ಯ ಪದದಿಂದ ನಿಂದನೆ; ಕರ್ತವ್ಯಕ್ಕೆ ಅಡ್ಡಿ ಆರೋಪ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್

18/10/2023, 18:03

ಬೆಳ್ತಂಗಡಿ(reporterkarnataka.com): ಅರಣ್ಯ ಇಲಾಖೆಯ ಅಧಿಕಾರಿಗೆ ಸಾರ್ವಜನಿಕವಾಗಿ ಅವಾಚ್ಯ ಪದಗಳಿಂದ ನಿಂದಿಸಿ ಸರಕಾರಿ ಕರ್ತವ್ಯಕ್ಕೆ ಅಡ್ಡಿಯುಂಟು ಮಾಡಿದ ಆರೋಪದ ಮೇಲೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ವಿರುದ್ಧ ಎಫ್ ಐಆರ್ ದಾಖಲಾಗಿದೆ.

ಕಳೆಂಜದ ಮೀಸಲು ಅರಣ್ಯ ಪ್ರದೇಶದ ಜಾಗವನ್ನು ಒತ್ತುವರಿ ಮಾಡಿ ನಿರ್ಮಿಸಿದ ಮನೆಯೊಂದನ್ನು ತೆರವುಗೊಳಿಸುವ ಕಾರ್ಯಕ್ಕೆ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆ ಸಿಬ್ಬಂದಿ ಮುಂದಾಗಿದ್ದರು. ಈ ಸಂದರ್ಭದಲ್ಲಿ ಶಾಸಕ ಹರೀಶ್‌ ಪೂಂಜ ಅವರು ಸಾರ್ವಜನಿಕವಾಗಿ ಅರಣ್ಯಾಧಿಕಾರಿ ಜಯಪ್ರಕಾಶ್ ಅವರನ್ನು
ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಅರಣ್ಯಾಧಿಕಾರಿ ಜಯಪ್ರಕಾಶ್ ಗೆ ‘ಲೋಫರ್ ನನ್ ಮಗ’ ಅಂತಾ ಬೈದಿದ್ದರು.
ಇಷ್ಟೇ ಅಲ್ಲದೆ ಕರ್ತವ್ಯಕ್ಕೆ ಅಡ್ಡಿಪಡಿಸಿರುವುದಾಗಿ ಆರೋಪಿಸಿ ಪುತ್ತೂರು ತಾಲೂಕು ರಾಜ್ಯ ಸರಕಾರಿ ನೌಕರರ ಸಂಘ ಖಂಡನೆ ವ್ಯಕ್ತಪಡಿಸಿತ್ತು. ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಗಿರೀಶ್‌ ನಂದನ್‌ ಅವರಿಗೆ ಈ ಕುರಿತು ದೂರು ನೀಡಲಾಗಿತ್ತು. ಸಾರ್ವಜನಿಕವಾಗಿ ಅರಣ್ಯ ಸಿಬಂದಿ ಮೇಲೆ ಸುಳ್ಳು ಆರೋಪ ಹೊರಿಸಿ ಮಾನ ಹಾನಿ ಮಾಡಿದ್ದಾರೆ ಎಂದು ಆರೋಪಿಸಿರುವ ಸಂಘವು ಶಾಸಕ ಹರೀಶ್‌ ಪೂಂಜ ಹಾಗೂ ಮತ್ತಿತರರ ವಿರುದ್ಧ ಐಪಿಸಿ 1860(U/S-143, 353, 504, 149) ಅಡಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಆಗ್ರಹಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು