2:31 AM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಅರಸೀಕೆರೆ: ಭೀಕರ ರಸ್ತೆ ಅಪಘಾತ: 4 ಮಂದಿ ಮಕ್ಕಳು ಸಹಿತ 9 ಮಂದಿ ಸಾವು; ಹಲವರಿಗೆ ಗಾಯ

16/10/2022, 10:58

ಹಾಸನ:(reporter Karnataka.com) : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು9 ಮಂದಿ ಅಸುನೀಗಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮನೆಗೆ ವಾಪಾಸಾಗುತ್ತಿದ್ದಾಗ ಈ ಘೋರ ದುರಂತ ನಡೆದಿದೆ.
ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಭೀಕರ ದುರಂತ ಸಂಭವಿಸಿದೆ.ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತಪಟ್ಟವರನ್ನು ದೊಡ್ಡಯ್ಯ (60), ಭಾರತಿ (50 ), ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12 ವರ್ಷ ), ತನ್ಮಯ್ (10ವರ್ಷ ), ಧ್ರುವ (2 ), ವಂದನಾ (20 ) ಎಂದು ಗುರುತಿಸಲಾಗಿದೆ.
ಒಟ್ಟು 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರು. ಧರ್ಮಸ್ಥಳ – ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಕುಟುಂಬ ದರ್ಶನ ಮುಗಿಸಿಕೊಂಡು ವಾಪಾಸಾಗುತ್ತಿತ್ತು. ಈ ವೇಳೆಯಲ್ಲಿ ಟೆಂಪೋ ಟ್ರಾವೆಲರ್ ಗೆ ಎದುರುಗಡೆ ರಾಂಗ್ ಸೈಡ್ ನಿಂದ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಲ್ಲದೇ ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಹಾಲಿನ ಟ್ಯಾಂಕರ್ ಶಿವಮೊಗ್ಗದಿಂದ ಚನ್ನರಾಯಪಟ್ಟಣದ ಕಡೆಗೆ ಚಲಿಸುತ್ತಿತ್ತು. ಅಪಘಾತ ಸಂಭವಿಸುತ್ತಿದ್ದಂತೆಯೇ ಹಾಲಿನ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬಾಣಾವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು