5:29 PM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಅರಸೀಕೆರೆ: ಭೀಕರ ರಸ್ತೆ ಅಪಘಾತ: 4 ಮಂದಿ ಮಕ್ಕಳು ಸಹಿತ 9 ಮಂದಿ ಸಾವು; ಹಲವರಿಗೆ ಗಾಯ

16/10/2022, 10:58

ಹಾಸನ:(reporter Karnataka.com) : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು9 ಮಂದಿ ಅಸುನೀಗಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮನೆಗೆ ವಾಪಾಸಾಗುತ್ತಿದ್ದಾಗ ಈ ಘೋರ ದುರಂತ ನಡೆದಿದೆ.
ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಭೀಕರ ದುರಂತ ಸಂಭವಿಸಿದೆ.ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತಪಟ್ಟವರನ್ನು ದೊಡ್ಡಯ್ಯ (60), ಭಾರತಿ (50 ), ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12 ವರ್ಷ ), ತನ್ಮಯ್ (10ವರ್ಷ ), ಧ್ರುವ (2 ), ವಂದನಾ (20 ) ಎಂದು ಗುರುತಿಸಲಾಗಿದೆ.
ಒಟ್ಟು 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರು. ಧರ್ಮಸ್ಥಳ – ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಕುಟುಂಬ ದರ್ಶನ ಮುಗಿಸಿಕೊಂಡು ವಾಪಾಸಾಗುತ್ತಿತ್ತು. ಈ ವೇಳೆಯಲ್ಲಿ ಟೆಂಪೋ ಟ್ರಾವೆಲರ್ ಗೆ ಎದುರುಗಡೆ ರಾಂಗ್ ಸೈಡ್ ನಿಂದ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಲ್ಲದೇ ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಹಾಲಿನ ಟ್ಯಾಂಕರ್ ಶಿವಮೊಗ್ಗದಿಂದ ಚನ್ನರಾಯಪಟ್ಟಣದ ಕಡೆಗೆ ಚಲಿಸುತ್ತಿತ್ತು. ಅಪಘಾತ ಸಂಭವಿಸುತ್ತಿದ್ದಂತೆಯೇ ಹಾಲಿನ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬಾಣಾವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು