7:04 PM Wednesday19 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಅರಸೀಕೆರೆ: ಭೀಕರ ರಸ್ತೆ ಅಪಘಾತ: 4 ಮಂದಿ ಮಕ್ಕಳು ಸಹಿತ 9 ಮಂದಿ ಸಾವು; ಹಲವರಿಗೆ ಗಾಯ

16/10/2022, 10:58

ಹಾಸನ:(reporter Karnataka.com) : ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 9 ಮಂದಿ ಸಾವನ್ನಪ್ಪಿದ್ದಾರೆ.

ಬಸ್, ಟಿಟಿ ವಾಹನ ಹಾಗೂ ಟ್ಯಾಂಕರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಟ್ಟು9 ಮಂದಿ ಅಸುನೀಗಿದ್ದಾರೆ. ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ಮನೆಗೆ ವಾಪಾಸಾಗುತ್ತಿದ್ದಾಗ ಈ ಘೋರ ದುರಂತ ನಡೆದಿದೆ.
ಹಾಸನ‌ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ಬಾಣವಾರ ಹೋಬಳಿ ಗಾಂಧಿ ನಗರ ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ 69 ರಲ್ಲಿ ಭೀಕರ ದುರಂತ ಸಂಭವಿಸಿದೆ.ಲಾರಿ ಬಸ್ ಮಧ್ಯೆ ಸಿಲುಕಿ ಟಿಟಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.

ಮೃತಪಟ್ಟವರನ್ನು ದೊಡ್ಡಯ್ಯ (60), ಭಾರತಿ (50 ), ಲೀಲಾವತಿ (50), ಚೈತ್ರಾ (33), ಸಮರ್ಥ (10), ಡಿಂಪಿ (12 ವರ್ಷ ), ತನ್ಮಯ್ (10ವರ್ಷ ), ಧ್ರುವ (2 ), ವಂದನಾ (20 ) ಎಂದು ಗುರುತಿಸಲಾಗಿದೆ.
ಒಟ್ಟು 14 ಮಂದಿ ಟಿಟಿ ವಾಹನದಲ್ಲಿ ಧರ್ಮಸ್ಥಳಕ್ಕೆ ತೆರಳಿದ್ದರು. ಧರ್ಮಸ್ಥಳ – ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿದ್ದ ಕುಟುಂಬ ದರ್ಶನ ಮುಗಿಸಿಕೊಂಡು ವಾಪಾಸಾಗುತ್ತಿತ್ತು. ಈ ವೇಳೆಯಲ್ಲಿ ಟೆಂಪೋ ಟ್ರಾವೆಲರ್ ಗೆ ಎದುರುಗಡೆ ರಾಂಗ್ ಸೈಡ್ ನಿಂದ ಬಂದ ಹಾಲಿನ ಟ್ಯಾಂಕರ್ ಡಿಕ್ಕಿ ಹೊಡೆದಿದೆ. ಅಲ್ಲದೇ ಬೆಂಗಳೂರಿನಿಂದ ಶಿವಮೊಗ್ಗದ ಕಡೆಗೆ ಸಾಗುತ್ತಿದ್ದ ಕೆಎಸ್ಆರ್ ಟಿಸಿ ಬಸ್ ಗೆ ಢಿಕ್ಕಿ ಹೊಡೆದಿದೆ ಎನ್ನಲಾಗುತ್ತಿದೆ. ಹಾಲಿನ ಟ್ಯಾಂಕರ್ ಶಿವಮೊಗ್ಗದಿಂದ ಚನ್ನರಾಯಪಟ್ಟಣದ ಕಡೆಗೆ ಚಲಿಸುತ್ತಿತ್ತು. ಅಪಘಾತ ಸಂಭವಿಸುತ್ತಿದ್ದಂತೆಯೇ ಹಾಲಿನ ಟ್ಯಾಂಕರ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾರೆ.

ಘಟನೆಯಲ್ಲಿ ಗಾಯಗೊಂಡಿರುವವರನ್ನು ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಬಾಣಾವರ ಠಾಣೆಯ ಪೊಲೀಸರು ಭೇಟಿ ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆಯನ್ನು ನಡೆಸುತ್ತಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು