9:47 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲ ಗೃಹ: ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ್

14/12/2024, 14:08

ಬೆಳಗಾವಿ(reporterkarnataka.com): ಆರ್ಥಿಕ ಇಲಾಖೆ ಅನುಮೋದನೆ ದೊರೆತ ನಂತರ ಅರಸೀಕೆರೆ ತರಕಾರಿ ಮಾರುಕಟ್ಟೆಯಲ್ಲಿ ಶೀತಲಗೃಹ ನಿರ್ಮಾಣ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.
ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಶಾಸಕ ಕೆ.ಎಂ. ಶಿವಲಿಂಗೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ತೋಟಗಾರಿಕೆ ಬೆಳೆ, ಪುಷ್ಪೋದ್ಯಮ, ಮೆಣಸಿನಕಾಯಿ ಆವಕ ಹೆಚ್ಚು ಇರುವ ಮಾರುಕಟ್ಟೆಗಳಲ್ಲಿ ಶೀತಲಗೃಹ ನಿರ್ಮಾಣ ಮಾಡಬೇಕು ಎಂಬುದು ಸರ್ಕಾರದ ಆಶಯವಾಗಿದೆ.
೨೦೨೪-೨೫ನೇ ಸಾಲಿನ ಆರ್‌ ಐಡಿಎಫ್‌ -೩೦ ಯೋಜನೆ ಅಡಿಯಲ್ಲಿ ೨೫೪.೫೦ ಕೋಟಿ ರೂ. ಅನುದಾನ ಮಂಜೂರು ಮಾಡಲು ಆರ್ಥಿಕ ಇಲಾಖೆಗೆ ಕೋರಿಕೆ ಸಲ್ಲಿಸಲಾಗಿದ್ದು, ೧೪೪.೭೫ ಕೋಟಿ ರೂ. ವೆಚ್ಚದಲ್ಲಿ ಶೀತಲ ಗೃಹ ಮತ್ತಿತರ ಸೌಕರ್ಯ ನಿರ್ಮಾಣಕ್ಕೆ ಅನುಮೋದನೆ ನೀಡಿತ್ತು.
ಆದರೆ ಬಹುತೇಕ ಸಚಿವರು ಮತ್ತು ಶಾಸಕರಿಂದ ಶೀತಲಗೃಹ ನಿರ್ಮಾಣದ ಕೋರಿಕೆಗಳು ಬಂದಿರುವ ಹಿನ್ನೆಲೆಯಲ್ಲಿ ೩೫೪.೭೫ ಕೋಟಿ ರೂ. ಹೆಚ್ಚುವರಿ ಅನುದಾನ ಕೋರಿ ಆರ್ಥಿಕ ಇಲಾಖೆಗೆ ಪುನಃ ಕೋರಿಕೆ ಸಲ್ಲಿಸಲಾಗಿದೆ. ಅನುಮೋದನೆ ದೊರೆತ ನಂತರ ಕಾಮಗಾರಿ ಆರಂಭಿಸಲಾಗುವುದು ಎಂದು ತಿಳಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು