1:11 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವಿಜಯಪುರ ಜಿಲ್ಲೆಯಲ್ಲಿ ಭೂಮಿ ಕಂಪಿಸಿದ ಅನುಭವ : ಆತಂಕಕ್ಕೊಳಗಾದ ಜನ ; ಭಯ ಬೇಡ ಎಂದ ಅಧಿಕಾರಿಗಳು

05/09/2021, 00:41

ವಿಜಯಪುರ (Reporterkarnataka.com)

ವಿಜಯಪುರ ಜಿಲ್ಲೆಯ ಕೆಲ ಭಾಗಗಳಲ್ಲಿ ಭೂಮಿ ಕಂಪಿಸಿದ ಅನುಭವವಾಗಿದ್ದು, ಜನರು ಮನೆಯಿಂದ ಹೊರಬಂದು ರಸ್ತೆಯಲ್ಲಿ ಸುರಕ್ಷಿತರಾಗಿರಲು ರಸ್ತೆಯಲ್ಲಿ ನಿಂತುಕೊಂಡಿದ್ದಾರೆ.

ಭೂಮಿಯಿಂದ ಭಯಂಕರ ಶಬ್ದ ಕೇಳಿ ಬಂದಿದ್ದು, ಗ್ರಾಮಸ್ಥರು ಭೂಕಂಪನವೆನ್ನುವ ಭೀತಿಯಿಂದ ನಡುಗುತ್ತಿದ್ದಾರೆ. ಆದರೆ ಅಧಿಕಾರಿಗಳು ಇದು ಕೇವಲ ಶಬ್ದ ಕಂಪನವಾಗಿದ್ದು, ಆತಂಕ ಪಡುವ ಅಗತ್ಯವಿಲ್ಲ ಎಂದು ಪತ್ರಿಕೆಯೊಂದಕ್ಕೆ ಹೇಳಿಕೆ ನೀಡಿದ್ದಾರೆ.

ಭಯ ಬೇಡ ಭೂಕಂಪನ ಅಲ್ಲ :
ಜಿಲ್ಲೆಯ ಕೆಲ ಭಾಗಗಳಲ್ಲಿ ಹಲವು ವರ್ಷಗಳಿಂದ ಭೂಕಂಪನದ ಸದ್ದು ಕೇಳಿ ಬರುತ್ತಿದೆ. ಈ ಮೊದಲು ತಿಕೋಟಾ, ಸೋಮದೇವರ ಹಟ್ಟಿ, ಕನಮಡಿ, ಬಾಬಾನಗರ ಭಾಗದಲ್ಲಿ ಭೂಕಂಪನದ ಅನುಭವವಾಗುತ್ತಿದೆ ಎಂದು ಇಲ್ಲಿನ ಗ್ರಾಮಸ್ಥರು ತೀವ್ರ ಭೀತಿಗೊಳ್ಳುತ್ತಿದ್ದರು. ಹೀಗೆ ಈ ಸಮಸ್ಯೆ ಪದೇ ಪದ ಕೇಳಿ ಬರುತ್ತಿದ್ದರಿಂದ ಕಳೆದ ವರ್ಷ ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ಅವರು ಭೂಕಂಪನದ ಪರಿಶೀಲನೆಗಾಗಿ ಬೆಂಗಳೂರಿನ ಗಣಿ ಮತ್ತು ಭೂ ವಿಜ್ಞಾನಿಗಳ ತಜ್ಞರಿಗೆ ಪತ್ರ ಬರೆದು ತೋರಿದ್ದರು. ಇದಾದ ಬಳಿಕ ಬೆಂಗಳೂರಿನ ಭೂ ವಿಜ್ಞಾನ ಅ ಕಾರಿಗಳು ತಿಕೋಟಾ ಭಾಗದ ಪ್ರದೇಶಗಳಿಗೆ ತೆರಳಿ ಪರಿಶೀಲಿಸಿ ವಿಜಯಪುರ ಜಿಲ್ಲೆಯಲ್ಲಿ ಭೂಕಂಪನ ಸಂಭವಿಸುವ ಸಾಧ್ಯತೆ ತೀರ ಕಡಿಮೆಯಿದೆ. ಜನರು ಆತಂಕ ಐಡುವ ಅಗತ್ಯವಿಲ್ಲ ಎಂದು ಹೇಳಿದ್ದರು. ಭೂಮಿಯಡಿಯಿಂದ ಕಳಿ ಬರುತ್ತಿರುವ ಭಯಂಕರ ಶಬ್ದ ಭೂಮಿಯೊಳಗಿನ ನೀರಿನ ಚಲನೆಯಿಂದ ಉಂಟಾಗುತ್ತಿದೆ. ಮಳೆಯಾದರೆ ಹೆಚ್ಚು ಭೂಮಿಯೊಳಗೆ ನೀರು ಇಂಗುವ ವೇಳೆ ಭೂ ಗರ್ಭದಲ್ಲಿ ನೈಸರ್ಗಿಕ ಕ್ರಿಯೆಯಿಂದ ಹೀಗೆ ಆಗುತ್ತಿದೆ ಎಂದು ತಜ್ಞರು ಹೇಳಿದ್ದಾರೆ ಎನ್ನಲಾಗಿದೆ
.

ಇತ್ತೀಚಿನ ಸುದ್ದಿ

ಜಾಹೀರಾತು