10:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಶಿಕ್ಷಕರ ಮಾರ್ಗದರ್ಶನದಲ್ಲಿ ಹಲವು ಸಾಮ್ರಾಜ್ಯಗಳು ನಿರ್ಮಾಣಗೊಂಡಿವೆ: ದುಂಡಪ್ಪಾ ಕೋಮಾರ

05/09/2021, 20:28

ರಾಹುಲ್ ಅಥಣಿ ಬೆಳಗಾವಿ
info.reporterkarnataka@gmail.com

ಶಿಕ್ಷಣ‌ ನೀಡಿ ಜೀವನ ಹಸನಾಗಿದ ಗುರುಗಳಿಗೆ ಒಳ್ಳೆಯ ಸ್ಥಾನ ಕೊಡುವ ನಿಮಿತ್ತ ಶಿಕ್ಷಕರ ದಿನಾಚರಣೆ ಮಾಡಲಾಗುತ್ತಿದೆ. ತಮ್ಮ ಜನ್ಮದಿನಾಚರಣೆಯನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಿ ಎಂದು ಕರೆ ಕೊಟ್ಟ ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಕಾರ್ಯ ಶ್ಲಾಘನೀಯ. ಉತ್ತಮ ಶಿಕ್ಷಕನಾದವನು ಮೊದಲು ತಾವು ಮಾದರಿಯಾಗಿದ್ದು ನಂತರ ವಿದ್ಯಾರ್ಥಿಳಿಗೆ ಹೇಳಿಕೊಡಬೇಕು ಎಂದು ತಾಲೂಕು ದಂಡಾಧಿಕಾರಿ ದುಂಡಪ್ಪಾ ಕೋಮಾರ ಹೇಳಿದರು.

ಶಿಕ್ಷಕರ ದಿನಾಚರಣೆ ಅಂಗವಾಗಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ನಂತರ ತಾಪಂ ಅಭಿವೃದ್ದಿ ಅಧಿಕಾರಿ ಶೇಖರ ಕರಬಸಪ್ಪಗೋಳ ಮಾತನಾಡಿ, ಮೊದಲಿನಗಿಂತ ಇವಾಗ ಶಿಕ್ಷಣ ವ್ಯವಸ್ಥೆ ಹೆಚ್ಚು ಸುಧಾರಿತವಾಗಿದೆ. ಸದ್ಯ ಶಿಕ್ಷಕರು ಮತ್ತು ಮಕ್ಕಳು ಹೆಚ್ಚೆಚ್ಚು ಚುರುಕಾಗಿದ್ದು ಶಿಕ್ಷಣದಲ್ಲಿ ಹೆಚ್ಚಿನ ಆಸಕ್ತಿ ತೋರುತ್ತಿದ್ದಾರೆಂದರು.

ಅಥಣಿ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಎಸ್. ಖೋತ ಅವರು ಮಾತನಾಡಿ, ಶಿಕ್ಷಕರಿಗೆ ಕೊರೊನಾದಿಂದ ಕಲಿಕೆಯಲ್ಲಿ ಉಂಟಾದ ನ್ಯೂನ್ಯತೆಗಳನ್ನು ಭರ್ತಿ ಮಾಡುವ ಸವಾಲು ಎದುರಾಗಿವೆ, ಎಲ್ಲ ಸವಾಲು ಮೀರಿ ನಾವು ನಮ್ಮ ವೃತ್ತಿಯನ್ನು ಪ್ರಾಮಾಣಿಕತೆಯಿಂದ ಸೇವೆ ಸಲ್ಲಿಸದರೆ ನಮ್ಮ ವೃತ್ತಿ ಸಾರ್ಥಕವಾಗುತ್ತದೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು