5:23 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಳಗ್ಗೆ 6ರಿಂದ ಮಧ್ಯಾಹ್ನ 2ರ ತನಕ ಕೋಳಿ ಅಂಗಡಿ ತೆರೆಯಲು ಅವಕಾಶ: ರಾಜ್ಯ ಸರಕಾರಕ್ಕೆ ಕೆಪಿಎಫ್ ಬಿಎ ಆಗ್ರಹ

23/05/2021, 19:26

ಮಂಗಳೂರು(reporterkarnataka news): ಕೋಳಿ ಅಂಗಡಿ ಮಾಲೀಕರು ರಾಜ್ಯ ಸರಕಾರಕ್ಕೆ ಮನವಿ ಮಾಡಿದ್ದಾರೆ. ಅದೇನೆಂದರೆ ರಾಜ್ಯಾದ್ಯಂತ ಕೋಳಿ ಮಾಂಸದ ಅಂಗಡಿಗಳನ್ನು ಬೆಳಗ್ಗೆ 6ರಿಂದ ಮಧ್ಯಾಹ್ನ 2ರವರೆಗೆ ತೆರೆಯಲಯ ಅವಕಾಶ ನೀಡಬೇಕು ಎಂದು ಕರ್ನಾಟಕ ಕುಕ್ಕುಟ ಕೃಷಿಕರ ಬ್ರೀಡರ್‌ಗಳ ಸಂಘ (ಕೆಪಿಎಫ್ ಬಿಎ) ರಾಜ್ಯ ಸರಕಾರವನ್ನು ಆಗ್ರಹಿಸಿದೆ. 

ಕೆಪಿಎಫ್ ಬಿಎ ಪಶು ಸಂಗೋಪನಾ ಮತ್ತು ಪಶುಪಾಲನಾ ಸೇವೆಗಳ ಇಲಾಖೆ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದು ಪ್ರಸ್ತುತ ಮುಂಜಾನೆ 6ರಿಂದ ಬೆಳಗ್ಗೆ 10ರವರೆಗೆ ಕಾರ್ಯನಿರ್ವಹಿಸಲು ಅವಕಾಶವಿದೆ. ಈ ಅವಧಿಯನ್ನು ವಿಸ್ತರಿಸಬೇಕು ಎಂದು ಮನವಿ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿ ಮತ್ತು ಮುಖ್ಯ ಕಾರ್ಯದರ್ಶಿಗೆ ಕಳುಹಿಸಲಾಗಿರುವ ಪತ್ರದಲ್ಲಿ ಕೆಪಿಎಬಿಎ ಅಧ್ಯಕ್ಷ ಡಾ.ಸುಶಾಂತ್ ರೈ ಬಿ, ಕೋಳಿಯು ಅತಿ ಅಗ್ಗದ ಪ್ರೊಟೀನ್ ಮೂಲವಾಗಿದ್ದು, ಪ್ರತಿರೋಧ ಶಕ್ತಿಯನ್ನು ಉತ್ತೇಜಿಸುವಂತದ್ದೂ ಆಗಿದೆ. ಇದಕ್ಕೆ ಬೆಂಬಲ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಪಶು ಸಂಗೋಪನಾ ಮತ್ತು ಪಶುಪಾಲನಾ ಸೇವೆಗಳ ಇಲಾಖೆ ಆಯುಕ್ತರು ಮತ್ತು ಮುಖ್ಯ ಕಾರ್ಯದರ್ಶಿ ಕೆಪಿಎಬಿಎ ಬರೆದಿರುವ ಪತ್ರದಲ್ಲಿ, ಕುಕ್ಕುಟ ಉತ್ಪನ್ನಗಳು ಬೇಗನೆ ಕೆಡುವ ಸ್ವರೂಪದ್ದಾಗಿದ್ದು, ಸಾಂಕ್ರಾಮಿಕ ಕಾಲಘಟ್ಟದಲ್ಲಿ ಸರಕಾರ ಈ ಉದ್ಯಮದ ಚೇತರಿಕೆಗೆ ಸರಕಾರ ನೆರವಾಗಬೇಕು ಎಂದು ಒತ್ತಾಯಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು