9:14 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ನಿವೃತ್ತ ಮುಖ್ಯೋಪಾಧ್ಯಾಯ ಮೊರಬನಹಳ್ಳಿ ಜಿ.ಲಕ್ಷ್ಮೀಪಾಲಪ್ಪ ಇನ್ನಿಲ್ಲ: ಗಣ್ಯರ ಸಂತಾಪ

10/09/2021, 17:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕು ಮೊರಬನಹಳ್ಳಿ ಗ್ರಾಮದ ವಾಲ್ಮೀಕಿ ಸಮುದಾಯದ ಹಿರಿಯರು, ನಿವೃತ್ತ ಮುಖ್ಯೋಪಾಧ್ಯಾಯರಾದ ಜಿ.ಲಕ್ಷ್ಮೀಪಾಲಪ್ಪ(75) ಅವರು ಕೂಡ್ಲಿಗಿ ಪಟ್ಟಣದ ಅವರ ನಿವಾಸದಲ್ಲಿ ನಿಧನರಾಗಿದ್ದಾರೆ.

ಅವರು ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಮೃತರು ಪತ್ನಿ, ಮೂವರು ಪುತ್ರಿಯರು, ಇಬ್ಬರು ಪುತ್ರರನ್ನು, ಅಪಾರ ಬಂಧು ಹಾಗೂ ಬಳಗವನ್ನು ಅಗಲಿದ್ದಾರೆ.

ಅವರು ಪ್ರೌಢಶಾಲಾ ವಿಭಾಗದಲ್ಲಿ ಆಂಗ್ಲಭಾಷೆ ಹಾಗೂ ವಿಜ್ಞಾನ ವಿಷಯದಲ್ಲಿ ಉಪಾಧ್ಯಾಯರಾಗಿದ್ದರು. ಬಳ್ಳಾರಿ ಜಿಲ್ಲೆಯ ಹರಪನಹಳ್ಳಿ ತಾಲೂಕಿನ ಕುಂಚೂರು,ಬಳ್ಳಾರಿಯ ಕುರುಗೋಡು, ಜೋಗಿಹಳ್ಳಿ, ಬಣವಿಕಲ್ಲು, ಕೂಡ್ಲಿಗಿ, ಹಿರೇಹೆಗ್ಡಾಳು ಗ್ರ‍ಾಮದಲ್ಲಿ ಹಾಗೂ ಇದಕ್ಕೂ ಮುನ್ನ ಬೇರೆ ಜಿಲ್ಲೆಗಳಲ್ಲಿ ತಮ್ಮ ಕರ್ಥವ್ಯ ನಿರ್ವಹಿಸಿದ್ದಾರೆ. ಅವರು ಹದಿನೈದು ವರ್ಷಗಳ ಹಿಂದೆ ಹಿರೇಹೆಗ್ಡಾಳು ಗ್ರಾಮದ ಪ್ರೌಢಶಾಲೆಯಲ್ಲಿ, ಮುಖ್ಯೋಪಾಧ್ಯಾಯರಾಗಿ ಕೆಲ ವರ್ಷಗಳ ಕಾಲ ಕರ್ಥವ್ಯ ನಿರ್ವಹಿಸಿ ನಂತರ ವಯೋ ನಿವೃತ್ತಿ ಹೊಂದಿದ್ದರು.

ಸಂತಾಪ: ಜಿ.ಲಕ್ಷ್ಮೀಪಾಲಪ್ಪರ ಅಗಲಿಕೆಗೆ ಕೂಡ್ಲಿಗಿ ತಾಲೂಕಿನ ವಾಲ್ಮೀಕಿ ಸಮುದಾಯದ ಹಿರಿಯರು, ವಿವಿಧ ಸಮುದಾಯಗಳ ಮುಖಂಡರು, ವಿವಿಧ

ಸಂಘ – ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ

ಪಕ್ಷಗಳ ಮುಖಂಡರು, ಸರ್ಕಾರಿ ನೌಕರರ ಸಂಘ ಹಾಗೂ ನಿವೃತ್ತ ನೌಕರರ ಸಂಘದ ಪದಾಧಿಕಾರಿಗಳು. ವಿವಿಧ ಜನ ಪ್ರತಿನಿಧಿಗಳು, ಮುಖ್ಯೋಪಾಧ್ಯಾಯರ ಬಳಗ ಹಾಗೂ ಅವರ ಸ್ನೇಹ ಬಳಗ, ಕೂಡ್ಲಿಗಿ ಪಟ್ಟಣದ ಸರ್ಕಾರಿ ಸಂಯುಕ್ತ ಪದವಿಪೂರ್ವ ಕಾಲೇಜಿನ ಹಳೇ ವಿದ್ಯಾರ್ಥಿಗಳು ಹಾಗೂ ಜಿಲ್ಲೆಯ ವಿವಿಧ ಭಾಗದ ಅವರ ಶಿಷ್ಯಬಳಗ ಅವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು