4:46 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಕೊರೊನಾ ಲಾಕ್ ಡೌನ್ ಗೆ ಸ್ಥಗಿತಗೊಂಡು ಬಸ್ ಮತ್ತೆ ಬರಲೇ ಇಲ್ಲ!: ಬಿ.ಬಿ.ತಾಂಡಕ್ಕೆ ಸಾರ್ವಜನಿಕ ಸಾರಿಗೆಗೆ ರೈತರ ಆಗ್ರಹ

11/09/2021, 10:40

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com 

ಜಿಲ್ಲೆಯ ಕೂಡ್ಲಿಗಿ ತಾಲೂಕು ಶಿವಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಂಡೇಬಸಾಪುರ ತಾಂಡಕ್ಕೆ ಬಸ್ ಸಂಚಾರ ಸೇವೆಯನ್ನು ಕಲ್ಪಿಸುವಂತೆ ರೈತ ಮುಖಂಡರ ನೇತೃತ್ವದಲ್ಲಿ ಗ್ರ‍ಾಮಸ್ಥರು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಆಗ್ರಹಿಸಿದ್ದಾರೆ. 

ಅವರು ಕೂಡ್ಲಿಗಿ ಘಟಕದ ಅಧಿಕಾರಿಗೆ ತಮ್ಮ ಹಕ್ಕೊತ್ತಾಯ ಪತ್ರ ನೀಡಿದ್ದಾರೆ.

ಬಂಡೇ ಬಸಾಪುರ ತಾಂಡ ತಾಲೂಕು ಕೇಂದ್ರದಿಂದ ಸುಮಾರು 5 ಕಿಮೀ ದೂರದಲ್ಲಿದೆ. ಕೋವಿಡ್ ಸಂದರ್ಭ ಹೊರತುಪಡಿಸಿದಂತೆ ಬಸ್ ಸಂಪರ್ಕ ಗ್ರಾಮಕ್ಕೆ ಈವರೆಗೂ ಇತ್ತು, ಕೋವಿಡ್ ಲ‍ಾಕ್ ಡೌನ್ ನಿಂದಾಗಿ ರದ್ದಾಗಿದೆ. ನಂತರದ ದಿನಗಳಲ್ಲಿ ಮತ್ತೆ ಬಸ್ ಕಲ್ಪಿಸಿಲ್ಲ, ಇದರಿಂದಾಗಿ ವಿದ್ಯಾರ್ಥಿಗಳಿಗೆ, ವೃದ್ಧರಿಗೆ, ಮಕ್ಕಳು ಹಾಗೂ ಗರ್ಭಿಣಿಯರಿಗೆ, ರೈತರು ಮತ್ತು ಅನಾರೋಗ್ಯಕ್ಕೆ ತುತ್ತಾದವರಿಗೆ ಬಸ್ ಸೌಲಭ್ಯ ಅನಿವಾರ್ಯವಾಗಿದೆ. ಕಾರಣ ಗ್ರಾಮಕ್ಕೆ  ಶೀಘ್ರವಾಗಿ ಬಸ್ ಸೌಕರ್ಯ ಕಲ್ಪಿಸಬೇಕೆಂದು, ರೈತ ಮುಖಂಡರು ಹಾಗೂ ಗ್ರಾಮಸ್ಥರು ಸಂಸ್ಥೆ ಅಧಿಕಾರಿಗಳಿಗೆ ಒತ್ತಾಯಿಸಿದ್ದಾರೆ. ಕ.ರಾ.ರೈತ ಸಂಘದ ಜಿಲ್ಲಾ ಕಾರ್ಯಧ್ಯಕ್ಷ ಎಂ.ಬಸವರಾಜ ನೇತೃತ್ವದಲ್ಲಿ ಹಕ್ಕೊತ್ತಾಯ ಮಾಡಲಾಗಿದೆ,ರೈತ ಮುಖಂಡರಾದ ಜಂಗಮ ಸೋವೇನಹಳ್ಳಿ ನಂದಿ ಜಂಬಣ್ಣ,  ಕೈವಲ್ಯಾಪುರ ವಿ.ನಾಗರಾಜ,ಬಿಬಿ ತಾಂಡದವರಾದಎಸ್.ಭಾಷಸಾಬ್,ಪಾಂಡುರಂಗನಾಯ್ಕ,ನಾರಾಯಣ ನಾಯ್ಕ, ನೇಮಿರಾಜನಾಯ್ಕ,ಕೆ.ನಿರಂಜನ,ಪಿ.ಭಾಷಾ ಸೇರಿದಂತೆ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು