8:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮೊವಾಡಿ: ಸ್ನೇಹಿತರ ಜತೆ ಈಜುತ್ತಿದ್ದ ವೇಳೆ ನೀರು ಪಾಲಾದ ಯುವಕನ ಮೃತದೇಹ 2 ದಿನಗಳ ಬಳಿಕ ಪತ್ತೆ

21/09/2021, 18:20

ಕುಂದಾಪುರ(reporterkarnataka.com):  ಮೊವಾಡಿ‌ ಸೇತುವೆ ಬಳಿ‌ ನದಿಯಲ್ಲಿ ಸ್ನೇಹಿತನೊಂದಿಗೆ ಈಜುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ನದಿ ಪಾಲಾದ ಯುವಕನ ಮೃತದೇಹ ಎರಡು ದಿನಗಳ ಬಳಿಕ ಬಂಟ್ವಾಡಿ ಸೇತುವೆ ಬಳಿಯ ಸೌಪರ್ಣಿಕ ನದಿಯಲ್ಲಿ ಪತ್ತೆಯಾಗಿದೆ. 

ತ್ರಾಸಿ  ಹೋಲಿಕ್ರಾಸ್  ಮಹೇಂದ್ರ (24) ನೀರುಪಾಲಾದ ಯುವಕ. ಸೌಪರ್ಣಿಕಾ ನದಿ ತೀರಕ್ಕೆ ಮಹೇಂದ್ರ, ಆಶಿಕ್ ಹಾಗೂ ಶರತ್ ತೆರಳಿದ್ದರು. ಮಹೇಂದ್ರ ಹಾಗೂ ಆಶಿಕ್ ನೀರಿಗೆ ಇಳಿದಿದ್ದು ಇನ್ನೋರ್ವ ಸ್ನೇಹಿತ ಶರತ್ ಸೇತುವೆ ಮೇಲೆ ನಿಂತು ವೀಕ್ಷಿಸುತ್ತಿದ್ದ. ಅದೇ ಸಂದರ್ಭದಲ್ಲಿ  ನೀರಿನ ಸೆಳೆತ ಹೆಚ್ಚಾಗುತಿತ್ತು. ಆಶಿಕ್ ನನ್ನು ಸ್ಥಳೀಯರಾದ ರತ್ನಾಕರ್ ಕಾಂಚನ್ ಮತ್ತು ಯೋಗೇಂದ್ರ ಕಾಂಚನ್ ರಕ್ಷಿಸಿದ್ದಾರೆ. ನೀರುಪಾಲಾದ ಯುವಕನಿಗಾಗಿ ಅಗ್ನಿ ಶಾಮಕ ಸಿಬ್ಬಂದಿ, ಸ್ಥಳಿಯರು ಹುಡುಕಾಟ ನಡೆಸಿದ್ದರು. ಸತತ ಎರಡೂ ದಿನಗಳಿಂದಲೂ ನೀರುಪಾಲಾದ ಯುವಕನ ಪತ್ತೆಗೆ ಶೋಧ ಕಾರ್ಯ ನಡೆಸಲಾಗಿತ್ತು. ಇದೀಗ ಮೃತದೇಹ ಪತ್ತೆಯಾಗಿದೆ.

ಗಂಗೊಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಇತ್ತೀಚಿನ ಸುದ್ದಿ

ಜಾಹೀರಾತು