1:28 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉಜಿರೆ ಎಸ್ ಡಿಎಂ ಕಾಲೇಜಿನಲ್ಲಿ ‘ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು’ ವಿಷಯದ ಬಗ್ಗೆ ಆನ್ಲೈನ್ ಕಾರ್ಯಾಗಾರ

26/09/2021, 19:04

ಮಂಗಳೂರು(reporterkarnataka.com): ಉಜಿರೆ ಎಸ್ ಡಿಎಂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ರಾಷ್ಟ್ರೀಯ ಸೇವಾ ಯೋಜನೆ ದಿನಾಚರಣೆ  ಪ್ರಯುಕ್ತ  ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ಮತ್ತು ಸೈನಿಕರು ಎಂಬ ವಿಷಯದ ಕುರಿತು ಆನ್ಲೈನ್ ಕಾರ್ಯಾಗಾರವು ಇತ್ತೀಚೆಗೆ ಜರುಗಿತು.

ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಭಾರತೀಯ ಸೇನೆಯ ನಿವೃತ್ತ ಯೋಧ ಬೆಳ್ಳಾಲ ಗೋಪಿನಾಥ ರಾವ್ ಮಾತನಾಡಿ, ವ್ಯಕ್ತಿತ್ವ ವಿಕಸನಕ್ಕೆ ನಿರಂತರ ಕಲಿಕೆ ಗುರಿ ಆತ್ಮವಿಶ್ವಾಸಗಳನ್ನು ರೂಢಿಸಿಕೊಳ್ಳಬೇಕು. ಸೇವೆಯೆ ಪರಮ ಗುರಿಯಾಗಬೇಕು ಎಂದು ಹೇಳಿದರು. 

ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ ಸಂಯೋಜನಾಧಿಕಾರಿ  ಡಾ. ನಾಗರತ್ನ ಕೆ. ಎ. ಮಾತನಾಡಿ, ರಾಷ್ಟ್ರೀಯ ಸೇವಾ ಯೋಜನೆ  ಸಮಾಜಕ್ಕೆ ಉತ್ತಮ ನಾಗರಿಕರನ್ನು ನೀಡುವಲ್ಲಿ ಯೋಜನಾಧಿಕಾರಿಗಳ ಪರಿಶ್ರಮ ಕೂಡ ಗಮನಾರ್ಹ. ಅದಕ್ಕೆ ಉದಾಹರಣೆ  ಉಜಿರೆ ಎಸ್ ಡಿ.ಎಂ ಕಾಲೇಜಿನ ಸ್ವಯಂ ಸೇವಕ ಹೃತಿಕ್ ಎಂದು ಪ್ರಶಂಸೆ ವ್ಯಕ್ತ ಪಡಿಸಿದರು.
ವಿದ್ಯಾರ್ಥಿಗಳು ಎನ್ಎಸ್ಎಸ್ ನ ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಯಶಸ್ಸು ಸಾಧಿಸಿ ಎಂದರು.

ಕಾರ್ಯಾಗಾರದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಿನ್ಸಿಪಾಲ್ ಡಾ. ಸತೀಶ್ಚಂದ್ರ ಮಾತನಾಡಿ ಶಿಕ್ಷಣವನ್ನು ನಾಲ್ಕು  ಗೋಡೆಗಳ ಮಧ್ಯೆ  ಸೀಮಿತವಾಗಿಸದೆ. ಬಾಹ್ಯ ಪ್ರಪಂಚವನ್ನು ಪರಿಚಯಿಸುವುದರ ಜೊತೆಗೆ ವ್ಯಕ್ತಿತ್ವ ವಿಕಸನ,ಜ್ಞಾನ ಮತ್ತು ಕೌಶಲ್ಯವನ್ನು ತಿಳಿಸುವಂತಾಗಬೇಕು ಎಂದರು. 

ಯೋಜನಾಧಿಕಾರಿ ಡಾ. ಕೆ. ಎಸ್. ಲಕ್ಷ್ಮೀನಾರಾಯಣ ಸ್ವಾಗತಿಸಿದರು.  ದೀಪಾ. ಆರ್. ವಂದಿಸಿದರು. ಸ್ವಯಂ ಸೇವಕಿ ಜಯಶ್ರೀ ಅತಿಥಿಗಳನ್ನು ಪರಿಚಯಿಸಿ,  ವಸುಮತಿ ನಿರೂಪಿಸಿದರು

ಇತ್ತೀಚಿನ ಸುದ್ದಿ

ಜಾಹೀರಾತು