7:25 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ: ಕಾರಣ ಏನು?

28/09/2021, 16:09

ತುಮಕೂರು(reporterkarnataka.com)
ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ಶಾಸಕ ಸುರೇಶ್‌ ಗೌಡ ರಾಜೀನಾಮೆ ನೀಡಿದ್ದಾರೆ.ಸುರೇಶ್ ಗೌಡ ಅವರು ತಮ್ಮರಾಜೀನಾಮೆ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾರೆ.

ತಮ್ಮ ಕ್ಷೇತ್ರದ ಜನರೊಂದಿಗೆ ಹೆಚ್ಚು ಸಮಯ ಕಳೆಯಲಾಗುತ್ತಿಲ್ಲ. ಅವರ ಕಷ್ಟಸುಖಗಳಲ್ಲಿ ಭಾಗಿಯಾಗಲು ಹೆಚ್ಚು ಸಮಯವೇ ಸಿಗುತ್ತಿರಲಿಲ್ಲ ಹೀಗಾಗಿ ಅವರೊಂದಿಗಿರಲು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿದ್ದಾರೆ.

ಜಿಲ್ಲೆಯ ಜನರು ತೋರಿಸಿದ ಪ್ರೀತಿ, ಬೆಂಬಲಕ್ಕೆ ಅಭಾರಿಯಾಗಿದ್ದೇನೆ. ಒಂದೂವರೆ ವರ್ಷದ ಹಿಂದೆ ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷನಾದ ಬಳಿಕ ಹಲವು ಸವಾಲುಗಳು ಎದುರಾದವು. ಅದರಲ್ಲಿ ಲೋಕಸಭೆ ಚುನಾವಣೆ ಜತೆಗೆ, ಶಿರಾ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯೂ ಎದುರಾಯಿತು ಎಂದು ವಿವರಣೆ ನೀಡಿದ್ದಾರೆ.

ಎರಡು ಬಾರಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕನಾಗಿ, ಎರಡು ಬಾರಿ ತುಮಕೂರು ಜಿಲ್ಲಾ ಅಧ್ಯಕ್ಷನಾಗಿ, ರಾಜ್ಯ ಘಟಕದ ಕಾರ್ಯದರ್ಶಿಯಾಗಿ ಯಶಸ್ವಿಯಾಗಲು ನನ್ನ ಕ್ಷೇತ್ರದ ಜನರು ತೋರಿದ ಪ್ರೀತಿ, ಸಹಕಾರ, ಬೆಂಬಲ ಕಾರಣ ಎಂದು ಅವರು ಕ್ಷೇತ್ರದ ಜನತೆಗೆ ಕೃತಜ್ಞತೆ ಸಲ್ಲಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕಟ್ಟಾ ಅನುಯಾಯಿ ಆಗಿರುವ ಸುರೇಶ್ ಗೌಡ ಅವರ ರಾಜೀನಾಮೆ ಹಲವು ಪ್ರಶ್ನೆಗಳ ಉದ್ಭವಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು