8:13 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕ್ಕೊಳ್ಳಿ : ಡಾ.ಕೃಷ್ಣಾನಂದ ಶೆಟ್ಟಿ

02/10/2021, 11:20

ಕಾರ್ಕಳ(reporterkarnataka.com): ವರ್ಷಕ್ಕೊಮ್ಮೆಯಾದರೂ ಆರೋಗ್ಯ ತಪಾಸಣೆ ನಡೆಸುವ ಪರಿಪಾಠ ಬೆಳೆಸಿಕೊಳ್ಳುವುದು ಉತ್ತಮ. ಮನುಷ್ಯನ ದೈಹಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಜೊತೆಗೆ ರೋಗಗಳ ಪತ್ತೆ ಮೊದಲ ಹಂತದಲ್ಲಿ ಪತ್ತೆ ಹಚ್ಚಲು ಸಹಕಾರಿಯಾಗುತ್ತದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಆಯುಷ್ಯಮಾನ್ ಭಾರತ್ ಯೋಜನೆ ಸಹಕಾರಿಯಾಗಿದೆ. ಇದರ ಪ್ರಯೋಜನ ಸುಲಭವಾಗಿ ಪಡೆಯುವಂತೆ ಕಾರ್ಕಳ ತಾಲೂಕು ಆರೋಗ್ಯಾಧಿಕಾರಿ ಡಾ.ಕೃಷ್ಣಾನಂದ ಶೆಟ್ಟಿ ಕರೆ ನೀಡಿದರು.

ಅವರು ಕಾರ್ಕಳದ ಎಸ್. ವಿ.ಟಿ ಶಿಕ್ಷಣ ಸಂಸ್ಥೆಯ ಸಭಾಂಗಣದಲ್ಲಿ ಉಡುಪಿ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ, ವೈದ್ಯಕೀಯ ಶಿಕ್ಷಣ ಇಲಾಖೆ , ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ, ಕಾರ್ಕಳ ತಾಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇದರ ಸಹಯೋಗದೊಂದಿಗೆ ಲಯನ್ಸ್ ಕ್ಲಬ್  ಕಾರ್ಕಳ ಇದರ ನೇತೃತ್ವದಲ್ಲಿ ನಡೆದ ವಿಶೇಷ ಉಚಿತ ಆರೋಗ್ಯ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶದ ಶಾಲಾ- ಕಾಲೇಜುಗಳಲ್ಲಿ ಇಂತಹ ಹಲವಾರು ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಹೆಚ್ಚಿನ ಪ್ರಮಾಣದ ಚಿಕಿತ್ಸೆ ಅಗತ್ಯವಿರುವ ಸುಮಾರು 150ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ವೈದ್ಯಕೀಯ ಶಿಕ್ಷಣ ಇಲಾಖೆಯು ನೀಡಿದೆ. ಕಾರ್ಕಳ ಲಯನ್ಸ್ ಕ್ಲಬ್ ಅದ್ಯಕ್ಷ ರಾಜೇಶ್ ಶೆಣೈರವರು ಹಲವಾರು ಸಾಮಾಜಿಕ ಕಳಕಳಿಯ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಆದರ್ಶ ಮೆರೆದಿದ್ದಾರೆ ಎಂದರು.

ಕಾರ್ಕಳ ಲಯನ್ಸ್ ಕ್ಲಬ್ ಅದ್ಯಕ್ಷ ರಾಜೇಶ್ ಶೆಣೈ ಮಾತನಾಡುತ್ತಾ, ಹದಿಹರೆಯದ ವಿದ್ಯಾರ್ಥಿಗಳಲ್ಲಿ ಮಾನಸಿಕ ಹಾಗೂ ದೈಹಿಕ ಬದಲಾವಣೆಗಳು ಸಹಜ. ಯೋಗ , ವ್ಯಾಯಾಮ ,ಧ್ಯಾನದ ಮೂಲಕ ಮನಸ್ಸಿನ ಏಕಾಗ್ರತೆ ಹೆಚ್ಚಿಸಲು ಹಾಗೂ ಮಾನಸಿಕ ಖಿನ್ನತೆಯನ್ನು ಸರಿಪಡಿಸಬಹುದು. ಹೆಚ್ಚಿನ ಚಿಕಿತ್ಸೆಯ ಅಗತ್ಯ ಬಂದಲ್ಲಿ ಲಯನ್ಸ್ ಕ್ಲಬ್ ಸಹಕಾರ ನೀಡಲಿದೆ ಮಾತ್ರವಲ್ಲದೆ  ಕಷ್ಟದಲ್ಲಿರುವ ಜನರ ಮಾನವೀಯ ಸೇವೆಗೆ ಸದಾ ಸಿದ್ದವಿದೆ ಎಂದರು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಕಾರ್ಯದರ್ಶಿ ನಿತ್ಯಾನಂದ ಭಂಡಾರಿ , ಕೋಶಾಧಿಕಾರಿ ಪ್ರಕಾಶ್ ಪಿಂಟೋ  ತಜ್ಞ ವೈದ್ಯರುಗಳಾದ ಡಾ.ನಾಗರಾಜ್ ಡಾ.ಸೌಜನ್ಯ ಡಾ.ಸಹಾನಾ ಕಾರ್ಕಳ ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್ , ಲಯನ್ಸ್ ಕ್ಲಬ್ ಸದಸ್ಯರಾದ ಪ್ರವೀಣ್ ಕುಮಾರ್ , ರವೀಂದ್ರ ಸಾಲಿಯಾನ್ , ನೇವಿಲ್ ಡಿಸೋಜ , ಪ್ರಕಾಶ್ ರಾವ್ ,ರಾಬರ್ಟ್ ಡಿಮೆಲ್ಲೊ ಉಪಸ್ಥಿತರಿದ್ದರು

ಇತ್ತೀಚಿನ ಸುದ್ದಿ

ಜಾಹೀರಾತು