12:25 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಒಳ್ಳೆಯ ಸಂಸ್ಕಾರ ಕಲಿತರೆ ಜವಾಬ್ದಾರಿಯುತ ‌ವ್ಯಕ್ತಿಯಾಗಲು ಸಾಧ್ಯ: ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್

03/10/2021, 20:00

ಕಾರ್ಕಳ(reporterkarnataka.com): ಮಕ್ಕಳು ಒಳ್ಳೆಯ ಸಂಸ್ಕಾರ ಕಲಿತರೆ ಮುಂದಿನ ದಿನಗಳಲ್ಲಿ ಒಳ್ಳೆಯ ಜವಾಬ್ದಾರಿಯುತ ಶ್ರೇಷ್ಠ ವ್ಯಕ್ತಿಯಾಗುತ್ತಾನೆ ಎಂದು ಕಾರ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ನಾಯಕ್ ಹೇಳಿದರು.

ಅವರು ಕಾರ್ಕಳ ತಾಲೂಕಿನ ಮುಂಡ್ಕೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ‘ನಮ್ಮ ಫ್ರೆಂಡ್ಸ್ ಮುಂಡ್ಕೂರು’ ಇದರ “25ನೇ ಹೆಜ್ಜೆಯ ಸಂಭ್ರಮ”ದ ಅಂಗವಾಗಿ ಮಕ್ಕಳಿಗೆ ಪ್ರೋತ್ಸಾಹ ಧನ ವಿತರಣೆ ಹಾಗೂ ಗಾಂಧಿ ಜಯಂತಿಯ ಪ್ರಯುಕ್ತ ಸ್ವಚ್ಛತಾ ಜಾಥಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ಕಾರ್ಯಕ್ರಮ ಉದ್ಘಾಟಿಸಿದ ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜಿನ ಸಂಚಾಲಕ ಡಾ. ಪಿ.ಬಾಲಕೃಷ್ಣ ಆಳ್ವ ಅವರು, ಮುಂಡ್ಕೂರು ಸ.ಹಿ.ಪ್ರಾ.ಶಾಲೆಯಲ್ಲಿ ಪ್ರಸ್ತುತ ವರ್ಷದಲ್ಲಿ ಒಂದನೇ ತರಗತಿಗೆ ಸೇರ್ಪಡೆಯಾದ 21 ಮಕ್ಕಳಿಗೆ ಪ್ರೋತ್ಸಾಹ ಧನ ವಿತರಿಸಿ, ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನಾಚರಣೆಯಂದು ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಧನ ಸಹಾಯ ನೀಡಿದ ತಂಡಕ್ಕೆ ಶುಭಾಶಂಸನೆ ಸಲ್ಲಿಸಿದರು.

ಕಜೆ ಮಾರಿಗುಡಿಯ ಗೌರವಾಧ್ಯಕ್ಷ ಎಂ.ಜಿ.ಕರ್ಕೇರ, ಚಂದ್ರಹಾಸ ಶೆಟ್ಟಿ, ನಮ್ಮ ಫ್ರೆಂಡ್ಸ್ ಮುಂಡ್ಕೂರು ತಂಡದ ಅಧ್ಯಕ್ಷ ಪ್ರಕಾಶ್ ನಾಯ್ಕ್, ಕಾರ್ಯದರ್ಶಿ ಅರುಣ್ ರಾವ್, ಗೌರವ ಸಲಹೆಗಾರರಾದ ಪ್ರಭಾಕರ ಶೆಟ್ಟಿ ಕೊಂಡಲ್ಲಿ, ಉದಯ್ ಕುಮಾರ್, ಶರತ್ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಪೂರ್ಣಿಮಾ ಭಟ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ ಪೂಜಾರಿ, ಶ್ರೀಮತಿ ಲಲಿತಾ, ಪ್ರಮೋದ್ ಕಜೆ, ಪ್ರಶಾಂತ್ ಆಚಾರ್ಯ ಮತ್ತಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು