11:35 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಹೆಬ್ರಿ ಹೋಬಳಿ ರಚನೆಗೆ ಸಚಿವ ಸಂಪುಟ ಅನುಮೋದನೆ: ಸಚಿವ ವಿ. ಸುನಿಲ್ ಕುಮಾರ್

05/10/2021, 19:08

ಕಾರ್ಕಳ(reporterkarnataka.com) : ಹೆಬ್ರಿ ತಾಲೂಕು ಕಾರ್ಕಳ ತಾಲೂಕಿನಿಂದ ಬೇರ್ಪಟ್ಟು ಪೂರ್ಣ ಪ್ರಮಾಣದ ತಾಲೂಕಾಗಿ ಘೋಷಣೆ ಆಗಿ ವರ್ಷಗಳಾದರೂ ಇಷ್ಟರವರೆಗೆ ಹೋಬಳಿ ಘೋಷಣೆ ಆಗದೇ ಇರುವುದರಿಂದ ಹಲವಾರು ಆಡಳಿತಾತ್ಮಕ ಸಮಸ್ಯೆಗಳು ತಲೆದೋರುತ್ತಿದ್ದು ಈ ನಿಟ್ಟಿನಲ್ಲ ಸಚಿವ ಸುನಿಲ್ ಕುಮಾರ್ ಹೆಬ್ರಿ ಹೋಬಳಿ ರಚನೆ ಮಾಡುವ ಬಗ್ಗೆ ಇಂದು ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಆಗಿರುತ್ತದೆ. 

ಹೆಬ್ರಿ ತಾಲೂಕು ರಚನೆಗೊಂಡು ತಾಲೂಕು ಕಚೇರಿ ಆರಂಭ ಆಗಿದ್ದರೂ ತಾಲೂಕಿನ ಹೆಚ್ಚಿನ ಗ್ರಾಮಗಳು ಅಜೆಕಾರು ಹೋಬಳಿಗೆ ಒಳಗೊಂಡಿತ್ತು. ಹಾಗೂ ಹೆಬ್ರಿ ತಾಲೂಕಿನ ಸಾರ್ವಜನಿಕರು ಕಂದಾಯ ಇಲಾಖೆಯ ಸೇವೆ ಪಡೆಯಲು ಅಜೆಕಾರು ನಾಡ ಕಚೇರಿಗೆ ಬಂದು ಅರ್ಜಿ ಸಲ್ಲಿಸಬೇಕಾಗಿತ್ತು.  ಇದರಿಂದ ಸಾರ್ವಜನಿಕರಿಗೆ ತುಂಬಾ ತೊಂದರೆಯಾಗುತ್ತಿತ್ತು ಮತ್ತು ಎರಡೂ ಕಡೆ ಒಬ್ಬರೇ ಕಂದಾಯ ನಿರೀಕ್ಷಕರು ಕರ್ತವ್ಯ ನಿರ್ವಹಿಸಬೇಕಾಗಿತ್ತು. 

ಈ ಎಲ್ಲ ಸಮಸ್ಯೆಗಳನ್ನು ಮನಗಂಡು ಮಾನ್ಯ ಸಚಿವ ವಿ. ಸುನಿಲ್ ಕುಮಾರ್  ಅವರು ಕಂದಾಯ ಸಚಿವ ಆರ್. ಅಶೋಕ್ ಅವರಿಗೆ ಮನವಿ ಮಾಡಿಕೊಂಡ ಮೇರೆಗೆ ಇಂದು ನಡೆದ ಸಚಿವ ಸಂಪುಟ ಸಭೆಗೆ ಅನುಮೋದನೆಗಾಗಿ ಕಡತ ಹಾಜರುಪಡಿಸಿದ್ದರು.

ಹೋಬಳಿ ರಚನೆ ಬಗ್ಗೆ ಶೀಘ್ರ ಸರ್ಕಾರಿ ಆದೇಶ ಜಾರಿ ಆಗಲಿದ್ದು ತದನಂತರ ಹೆಬ್ರಿ ತಾಲೂಕು ಕೇಂದ್ರದಲ್ಲಿಯೇ ಕಂದಾಯ ಸೇವೆಗಳು ಆರಂಭವಾಗಲಿದ್ದು, ಹೆಬ್ರಿ ಕೇಂದ್ರ ಸ್ಥಾನಕ್ಕೆ ಓರ್ವ ಕಂದಾಯ ನಿರೀಕ್ಷಕರು ಹಾಗೂ ಇನ್ನಿತರ ಹುದ್ದೆಗಳು ಸೃಷ್ಠಿಯಾಗಲಿದೆ. ಇದರಿಂದ ತಾಲೂಕಿನ ಸಾರ್ವಜನಿಕರಿಗೆ ತ್ವರಿತವಾಗಿ ಮತ್ತು ನಿಗದಿತ ಕಾಲಮಿತಿಯಲ್ಲಿ ಸೇವೆಗಳನ್ನು ಪಡೆಯಲು ಅನುಕೂಲವಾಗಲಿದೆ ಎಂದು ಸಚಿವರ ಕಛೇರಿ ಪ್ರಕಟಣೆಯಲ್ಲಿ ತಿಳಿಸಿದೆ.

ಇತ್ತೀಚಿನ ಸುದ್ದಿ

ಜಾಹೀರಾತು