5:29 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಲ್ಪೆ ಮೀನು ಲಾರಿ ಡ್ರೈವರ್ ಅಪಹರಣ ಪ್ರಕರಣ ಸುಖಾಂತ್ಯ: ತಿರುವನಂತಪುರದಿಂದ ಚಾಲಕನ ಕರೆದು ತಂದ ಪೊಲೀಸರು

06/10/2021, 19:20

ಮಲ್ಪೆ(reporterkarnataka.com): ಕೆಲವು ದಿನಗಳ ಹಿಂದೆ ಮಲ್ಪೆಯಲ್ಲಿ ನಡೆದ ಮೀನು ಟ್ರಕ್ ಚಾಲಕನ ಅಪಹರಣ ಪ್ರಕರಣ ಸುಖಾಂತ್ಯಗೊಂಡಿದೆ. ಪೊಲೀಸರು ಅಪಹರಣಗೊಂಡ ಚಾಲಕನನ್ನು ಪತ್ತೆ ಹಚ್ಚಿ ತಿರುವನಂತಪುರದಿಂದ ವಾಪಸ್ ಕರೆ ತಂದಿದ್ದಾರೆ.

ಘಟನೆ ವಿವರ: ಮೀನು ವ್ಯಾಪಾರಿಯೊಬ್ಬರನ್ನು ಕಿಡ್ನಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟ ಪ್ರಕರಣ ಉಡುಪಿಯ ಮಲ್ಪೆಯಲ್ಲಿ ನಡೆದಿತ್ತು. ಈ ಕುರಿತು ಸಾಧಿಕ್ ಎಂಬವವರು ದೂರು ನೀಡಿದ್ದರು.
ಚಿಕ್ಕಮಗಳೂರಿನ ಕೊಪ್ಪದಿಂದ ತಮ್ಮನಾದ ಸುಲೈಮಾನ್ ಎಂಬವರು ಮೀನು ಲಾರಿಯ ಚಾಲಕನಾಗಿ ಕೆಲಸ ಮಾಡಿಕೊಂಡಿದ್ದು, ಸೆ.30 ರಂದು ಬೆಳಿಗ್ಗೆ 9. 00 ಗಂಟೆಗೆ ಕೊಪ್ಪದ ಮನೆಯಿಂದ ಮಲ್ಪೆಗೆ ಮೀನು ಲಾರಿಯ ಚಾಲಕ ಕೆಲಸಕ್ಕೆ ಬಂದಿದ್ದ. ಅ.1ರಂದು ಇನ್ನೊಬ್ಬ ತಮ್ಮನಾದ ಶಂಶುದ್ದೀನ್ ಎಂಬಾತ ಸುಲೈ ಮಾನ್ ಗೆ ಕರೆ ಮಾಡಿದಾಗ ಪೋನ್ ಕರೆ ಸ್ವೀಕರಿಸಲಿಲ್ಲ.

ಸೆ.2ರಂದು ಬೆಳಗ್ಗೆ 9.00 ಗಂಟೆಗೆ ಸುಲೈಮಾನ್ ನ ಮೊಬೈಲ್ ನಂಬ್ರದಿಂದ ಶಂಶುದ್ದೀನ್ ಗೆ ಕರೆ ಬಂದಿತ್ತು. ಆ ಕಡೆಯಿಂದ ಸಮೀರ್ ಎಂಬವನು ಮಾತನಾಡಿ ಸುಲೈ ಮಾನ್ ನಮ್ಮ ಜೊತೆಗೆ ಇದ್ದಾನೆ. ಆತನನ್ನು ಬಿಡಬೇಕಾದರೆ ನಮಗೆ 15 ಲಕ್ಷ ಕೊಡಬೇಕು.

ಆತನನ್ನು ಸೆ.1 ರಂದು ಮಲ್ಪೆಯಿಂದ ನಾವು ಅಪಹರಣ ಮಾಡಿದ್ದೇವೆ ಎಂದು ತಿಳಿಸಿದ್ದನು.ನಂತರ ಸುಲೈಮಾನ್ ಸಂಬಂಧಿಕರು ಮಲ್ಪೆಗೆ ಬಂದು ಆತನ ಬಗ್ಗೆ ವಿಚಾರಿಸಿದ್ದರು. ಸುಲೈಮಾನ್ ಮೀನು ಲಾರಿಯ ಚಾಲಕ ಕೆಲಸದ ಜೊತೆಗೆ ಮೀನನ್ನು ಮಲ್ಪೆಯಲ್ಲಿ ತೆಗೆದುಕೊಂಡು ಕೇರಳಕ್ಕೆ ಹೆಚ್ಚಿನ ದರಕ್ಕೆ ಮಾರಾಟ ಮಾಡುತ್ತಿರುವ ವಿಷಯ ತಿಳಿದು ಬಂದಿತ್ತು.

ನಂತರ  ಸುಲೈಮಾನ್ ಮೊಬೈಲಿಗೆ ಕರೆ ಮಾಡಿದಾಗ ಕರೆಯನ್ನು ಸಮೀರ್ ಎಂಬವನು ಸ್ವೀಕರಿಸಿ ನಮಗೆ ಸುಲೈಮಾನ್ ಮೀನು ವ್ಯವಹಾರದಲ್ಲಿ  15 ಲಕ್ಷ ಹಣ ಕೊಡಬೇಕು.  ಆ ಕಾರಣದಿಂದ ಅವನನ್ನು ಕೇರಳದ ಹನಸ್ ಮತ್ತು ಅವರ ಸಹೋದರರು  ಅಪಹರಿಸಿದ್ದಾರೆ. ನೀವು ಬಂದು 15 ಲಕ್ಷ ಹಣ ಕೊಟ್ಟು ಕರೆದುಕೊಂಡು ಹೋಗಿ, ಇಲ್ಲದಿದ್ದರೆ ಆತನನ್ನು ಕೊಂದು ಸಮುದ್ರಕ್ಕೆ ಬಿಸಾಡುತ್ತೇವೆ ಎಂದು ಬೆದರಿಕೆ ಹಾಕಿದ್ದನು. ಈ ಕುರಿತು ಸಾದಿಕ್ ಮಲ್ಪೆ ಠಾಣೆಗೆ ದೂರು ನೀಡಿದ್ದರು. 

ಇತ್ತೀಚಿನ ಸುದ್ದಿ

ಜಾಹೀರಾತು