1:04 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಫೇಸ್ಬುಕ್, ವಾಟ್ಸಾಪ್ ಬೆನ್ನಲ್ಲೇ ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್ ವರ್ಕ್ ಡೌನ್: ಗ್ರಾಹಕರಲ್ಲಿ ಕ್ಷಮೆಯಾಚಿಸಿದ ಕಂಪನಿ!

06/10/2021, 20:11

ಹೊಸದಿಲ್ಲಿ(reporterkarnataka.com);

ಮೊನ್ನೆಯಷ್ಟೆ ಫೇಸ್‌ಬುಕ್‌, ವಾಟ್ಸಾಪ್, ಇನ್ಟಾಗ್ರಾಂ ಸರ್ವರ್ ಡೌನ್ ಆಗಿದ್ದು, ಇಂದು ದೇಶದ ಹಲವೆಡೆ ಜಿಯೋ ಮೊಬೈಲ್ ನೆಟ್  ವರ್ಕ್ ಡೌನ್ ಆಗಿದೆ. ಈ ಕುರಿತು ಹಲವಾರು ಮಂದಿ ಜಿಯೋ ಬಳಕೆದಾರರು ಟ್ವಿಟರ್ ನಲ್ಲಿ ನೆಟ್ ವರ್ಕ್  ಡೌನ್ ಆಗಿದೆ ಎಂದು ದೂರುಗಳನ್ನು ನೀಡಿದ್ದಾರೆ. #jioddown ಎಂಬುದು ಟ್ವಿಟರ್ ಟ್ರೆಂಡಿಂಗ್ ಕೂಡಾ ಆಗಿದೆ.

ಡೌನ್ ಡಿಟೆಕ್ಟರ್  (Downdetector)ನಲ್ಲಿ ಸುಮಾರು 4000 ಮಂದಿ ಬೆಳಗ್ಗೆಯಿಂದ ಜಿಯೋ ನೆಟ್ ವರ್ಕ್ ಸಮಸ್ಯೆ ಇದೆ ಎಂದು ದೂರು ನೀಡಿದ್ದಾರೆ.

ರಿಲಯನ್ಸ್ ಜಿಯೋದ ಅಧಿಕೃತ ಗ್ರಾಹಕ ಸೇವಾ ಟ್ವಿಟರ್ ಖಾತೆಯಾದ @JioCare ಖಾತೆಗೆ ಸಾಕಷ್ಟು ಮಂದಿ ದೂರುಗಳನ್ನು ನೀಡಿದ್ದಾರೆ. ದೇಶದ ವಿವಿಧ ಕಡೆಗಳಿಂದ ಈ ದೂರುಗಳು ಬಂದಿವೆ. ಇದಕ್ಕೆ ಪ್ರತಿಕ್ರಿಯೆ ನೀಡಿರುವ ಜಿಯೋ ನಿಮಗೆ ಉಂಟಾದ ಅನಾನುಕೂಲತೆಗೆ ನಾವು ವಿಷಾದಿಸುತ್ತೇವೆ ಎಂದಿದೆ.

ಇದರ ಜೊತೆಗೆ ಇಂಟರ್ನೆಟ್ ಸೇವೆಗಳನ್ನು ಬಳಸುವಾಗ ಮತ್ತು ಕರೆ/ಎಸ್‌ಎಂಎಸ್ ಮಾಡುವಾಗ ಇಂತಹ ಸಮಸ್ಯೆ ಎದುರಾಗಬಹುದು. ಈ ಸಮಸ್ಯೆ ತಾತ್ಕಾಲಿಕವಾಗಿದ್ದು, ಆದಷ್ಟು ಬೇಗ ಸಮಸ್ಯೆ ಪರಿಹರಿಸಲಾಗುತ್ತದೆ ಎಂದು ಜಿಯೋ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು