11:11 PM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬಂಟ್ವಾಳ ಭಂಡಾರಿಬೆಟ್ಟು ಯುವಜನ ವ್ಯಾಯಾಮ ಶಾಲೆಗೆ ತುಲು ಲಿಪಿ ನಾಮಫಲಕ 

11/10/2021, 11:04

ಬಂಟ್ವಾಳ(reporterkarnataka.com):

ವಿಶ್ವ ತುಲು ಲಿಪಿ ದಿನವಾದ ಅಕ್ಟೋಬರ್ 10 ರಂದು ಬಂಟ್ವಾಳ ತಾಲೂಕಿನ ಭಂಡಾರಿಬೆಟ್ಟುವಿನಲ್ಲಿ ಯುವಜನ ವ್ಯಾಯಾಮ ಶಾಲೆಯ ನಾಮಫಲಕವನ್ನು ತುಲು ಲಿಪಿಯಲ್ಲಿ ಹಾಕಲಾಯಿತು. 

ತುಲು ಲಿಪಿ ಶಿಕ್ಷಕರು ಹಾಗೂ ಜೈ ತುಲುನಾಡ್ (ರಿ.) ಸಂಘಟನೆಯ ಉಪ ಸಂಘಟನಾ ಕಾರ್ಯದರ್ಶಿ ಜಗದೀಶ ಗೌಡ ಕಲ್ಕಳ ಅವರು ತುಲು ಲಿಪಿ ನಾಮಫಲಕವನ್ನು ಅನಾವರಣಗೊಳಿಸಿದರು.

ಹಾಗೆಯೇ ತುಲು ಲಿಪಿ ದಿನದ ವಿಶೇಷತೆ ಹಾಗೂ ಪುಂಡೂರು ವೆಂಕಟರಾಜ ಪುಣಿಂಚಿತ್ತಾಯ (ಪುವೆಂಪು) ಇವರ ಹುಟ್ಟುಹಬ್ಬವನ್ನು ತುಲು ಲಿಪಿ ದಿನವಾಗಿ ಆಚರಿಸುವುದರ ಬಗ್ಗೆ ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ತುಲು ಲಿಪಿಯಲ್ಲಿ ನಾಮಫಲಕವನ್ನು ಬರೆದ ಜಯ ಆರ್ಟ್ಸ್‌ನ ಜಯರಾಮ, ಯುವಜನ ವ್ಯಾಯಾಮ ಶಾಲೆ ಭಂಡಾರಿಬೆಟ್ಟು ಇದರ ಅಧ್ಯಕ್ಷರಾದ ಹೆನ್ರಿ ಪಿರೇರಾ ಉಪಸ್ಥಿತಿ ಇದ್ದರು. ತುಲುನಾಡ ಯುವಸೇನೆ ಬಂಟ್ವಾಳ ಇವರ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು. ತುಲು ಲಿಪಿ ಶಿಕ್ಷಕರಾದ ಪೃಥ್ವಿ ತುಲುವೆ ಕಾರ್ಯಕ್ರಮವನ್ನು ನಿರೂಪಿಸಿದರು. ನಾಮಫಲಕ ಅನಾವರಣದ ನಂತರ ಜೈ ತುಲುನಾಡ್ (ರಿ.), ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ನಡೆದ ಬಲೆ ತುಲು ಲಿಪಿ ಕಲ್ಪುಗ ಕಾರ್ಯಾಗಾರದ ತುಲು ಲಿಪಿ ಪರೀಕ್ಷೆ ನಡೆಯಿತು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ, ಪೂರ್ಣಿಮಾ ಬಂಟ್ವಾಳ ಮತ್ತು ಪೃಥ್ವಿ ತುಲುವೆ ಪರೀಕ್ಷೆಯನ್ನು ನಡೆಸಿಕೊಟ್ಟರು.

ಇತ್ತೀಚಿನ ಸುದ್ದಿ

ಜಾಹೀರಾತು