9:17 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಮಂಗಳೂರು ರಥಬೀದಿ ವೆಂಕಟರಮಣ ದೇವಳ ಶಾರದೆ ಪ್ರತಿಷ್ಠೆ: ದೀಪಾಲಂಕಾರ, ವಿಶೇಷ ಪೂಜೆ

11/10/2021, 20:55

ಮಂಗಳೂರು(reporterkarnataka.com): ನಗರದ ರಥಬೀದಿ ಶ್ರೀ ಶಾರದಾ ಮಹೋತ್ಸವ ಸಮಿತಿ ವತಿಯಿಂದ ಶ್ರೀ ವೆಂಕಟರಮಣ ದೇವಳದ ಆಚಾರ್ಯ ಮಠದ ವಸಂತ ಮಂಟಪದಲ್ಲಿ ನಡೆಯುತ್ತಿರುವ 99ನೇ ವರ್ಷದ ಸಾರ್ವಜನಿಕ ಶಾರದಾ ಮಹೋತ್ಸವ ಅಂಗವಾಗಿ ಶಾರದಾ ಮಾತೆಯ ಮೂರ್ತಿ ಪ್ರತಿಷ್ಠೆ ಸೋಮವಾರ ನಡೆಯಿತು. ಅಕ್ಟೋಬರ್ 16ರ ವರೆಗೆ ಮಹೋತ್ಸವ ಸಂಪನ್ನಗೊಳ್ಳಲಿದೆ.

ಭಾನುವಾರ ರಾತ್ರಿ ಗಂಟೆ 8.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹವನ್ನು ವೆಂಕಟರಮಣ ದೇವಳದ ರಾಜಾಂಗಣದಿಂದ ಉತ್ಸವ ಸ್ಥಾನಕ್ಕೆ ತರಲಾಯಿತು. ಸೋಮವಾರ ಮಧ್ಯಾಹ್ನ ಗಂಟೆ 1.00ಕ್ಕೆ ಶ್ರೀ ಶಾರದಾ ಮಾತೆಯ ವಿಗ್ರಹ ಪ್ರತಿಷ್ಠೆ ನೆರವೇರಿತು. ಶುಕ್ರವಾರದವರೆಗೆ ದೀಪಾಲಂಕಾರ ಹಾಗೂ ರಾತ್ರಿ ಪೂಜೆ ನಡೆಯಲಿದೆ. ಬೆಳಿಗ್ಗೆ 10.00 ಗಂಟೆಯಿಂದ 12.00 ಗಂಟೆಯವರೆಗೆ ವಿದ್ಯಾರಂಭ ಸೇವೆ ಸಂಪನ್ನಗೊಳ್ಳಲಿದೆ.

ಅ. 16 ಶನಿವಾರ ಸಂಜೆ ಗಂಟೆ 5.00ಕ್ಕೆ ಪೂರ್ಣಾಲಂಕಾರಗೊಂಡ ಶ್ರೀ ಶಾರದಾ ಮಾತೆಯ ದರ್ಶನವನ್ನು ಪಡೆಯಬಹುದು. ನಂತರ ಶ್ರೀ ಮಹಾಮಾಯಾ ತೀರ್ಥದಲ್ಲಿ ಶ್ರೀ ಶಾರದಾ ಮಾತೆಯ ವಿಗ್ರಹ ವಿಸರ್ಜನೆ ನಡೆಯಲಿದೆ

ಪ್ಲವ ನಾಮ ಸಂವತ್ಸರದ ಆಸ್ವೀಜ ಶುದ್ಧ ಪಂಚಮಿ ದಿನ ಆರಂಭಗೊಂಡ ಉತ್ಸವ ಏಕಾದಶಿ ಶನಿವಾರ(ಅ.16)ರ ವರೆಗೆ ನಡೆಯಲಿದೆ.

ಇತ್ತೀಚಿನ ಸುದ್ದಿ

ಜಾಹೀರಾತು