4:35 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ದೇವೇಗೌಡ್ರು ವಿರೋಧ ಪಕ್ಷದ ನಾಯಕರಾಗಿದ್ರು, ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ?: ಸಿದ್ದರಾಮಯ್ಯ ಪ್ರಶ್ನೆ

13/10/2021, 17:33

ಬೆಂಗಳೂರು(reporterkarnataka.com): ದೇವರಾಜ ಅರಸ್ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಎಚ್. ಡಿ. ದೇವೇಗೌಡರು ವಿರೋಧ ಪಕ್ಷದ ನಾಯಕರಾಗಿದ್ದರು. ಹಾಗಾದರೆ ಅವರದ್ದು ಪೋಸ್ಟು ಪುಟುಗೋಸಿನಾ..?

ಇದು ಮಾಜಿ ಮುಖ್ಯಮಂತ್ರಿ  ಹಾಗೂ ಹಾಲಿ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ಪ್ರಶ್ನೆ. ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರ ಆಕ್ಷೇಪಾರ್ಹ ಹೇಳಿಕೆಗೆ ಕೆಂಡಾಮಂಡಲವಾದ ಸಿದ್ದರಾಮಯ್ಯ ಈ ಪ್ರಶ್ನೆ ಹಾಕಿದ್ದಾರೆ.

ಮಾಧ್ಯಮ ಜತೆ ಮಾತನಾಡಿದ ಅವರು ಪ್ರಶ್ನೆಯೊಂದಕ್ಕೆ ಉತ್ತರಿಸಿ, ಕುಮಾರಸ್ವಾಮಿ ಅವರಿಗೆ ನನ್ನ ಕಂಡರೆ ಭಯ. ಹಾಗಾಗಿ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾರೆ. ನಾನು ಇಂತಹ ಬೆದರಿಕೆಗೆ ಜಗ್ಗವವನ್ನಲ್ಲ. 1971ರಲ್ಲಿ ನಾನು ಕಾನೂನು ವಿದ್ಯಾರ್ಥಿಯಾಗಿದ್ದಾಗ ರಾಜಕೀಯ ಪ್ರವೇಶಿಸಿದ್ದೇನೆ. 50 ವರ್ಷಗಳ ರಾಜಕೀಯ ಮಾಡಿದ್ದೇನೆ. ಕುಮಾರಸ್ವಾಮಿಯವರು ಯಾವಾಗ ರಾಜಕೀಯಕ್ಕೆ ಬಂದ್ರು? ದೇವೇಗೌಡ ಅವರು ಮುಖ್ಯಮಂತ್ರಿಯಾದ ಬಳಿಕ 1997ರಲ್ಲಿ ಕುಮಾರಸ್ವಾಮಿ ರಾಜಕೀಯಕ್ಕೆ ಬಂದ್ರು. ಒಬ್ಬ ಮಾಜಿ ಮುಖ್ಯಮಂತ್ರಿ ತುಂಬಾ ಲಘುವಾಗಿ ಮಾತನಾಡಬಾರದು. ಸಾಂವಿಧಾನಿಕ ಹುದ್ದೆಯ ಬಗ್ಗೆ ಮಾತನಾಡಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು