9:34 PM Thursday6 - November 2025
ಬ್ರೇಕಿಂಗ್ ನ್ಯೂಸ್
Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ…

ಇತ್ತೀಚಿನ ಸುದ್ದಿ

ಕೆನರಾ ಕಾಲೇಜಿನ ವತಿಯಿಂದ ಕೋವಿಡ್ 19 ಸಂದರ್ಭದಲ್ಲಿ ಒತ್ತಡ ನಿರ್ವಹಣೆ ಕುರಿತು ಆನ್ಲೈನ್ ಕಾರ್ಯಾಗಾರ

27/05/2021, 22:59

ಮಂಗಳೂರು(Reporterkarnatkanews): ಕೆನರಾ ಕಾಲೇಜು, ಮಂಗಳೂರು ಇದರ ರಾಷ್ಟ್ರೀಯ ಸೇವಾ ಯೋಜನೆಯು “ಕೋವಿಡ ೧೯ ರ ಸಂದರ್ಭದಲ್ಲಿ ಒತ್ತಡ ನಿರ್ವಹಣೆ ” ಎಂಬ ಕಾರ್ಯಾಗಾರವನ್ನು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದ.ಕ,ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರವಿಜ್ಞಾನ ಸಂಸ್ಥೆ, ಬೆಂಗಳೂರು ಮತ್ತು ಯುವ ಸ್ಪಂದನ ಕೇಂದ್ರ, ಮಂಗಳೂರು ಇವರ ಸಹಯೋಗದಿಂದ ಆನ್ಲೈನ್ ಮೂಲಕ ಜರುಗಿತು.

ವಿವೇಕಾನಂದ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಶ್ರೀನಾಥ ಬಿ ಕಾರ್ಯಾಗಾರದ ಮುಖ್ಯ ಅತಿಥಿಯಾಗಿದ್ದರು.ಅವರು ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿ, ಆತ್ಮ ವಿಶ್ವಾಸ ಮತ್ತು ಉತ್ತಮ ಆರೋಗ್ಯ ದಿಂದ ದೈನಂದಿನ ಒತ್ತಡವನ್ನು ಕಡಿಮೆಮಾಡಿಕೊಳ್ಳ ಬಹುದು. ಯುವಕರಾದ ತಾವುಗಳು ಕೋವಿಡ ೧೯ ಸಂದರ್ಭದಲ್ಲಿ ಜನೋಪಯೋಗಿ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದರು.

ಸಂಪನ್ಮೂಲ ವ್ಯಕ್ತಿಯಾಗಿ ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆ, ಬೆಂಗಳೂರು ಇದರ ಜೀವನ ಕೌಶಲ್ಯ ತರಬೇತುದಾರ, ಶ್ರೀ ಕಾಂತ ಪೂಜಾರಿ, ಬಿರಾವು ಮಾತನಾಡಿ “ದೀರ್ಘಕಾಲೀನ ಒತ್ತಡ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ನಿತ್ಯದ ಜೀವನಶೈಲಿ ಸೃಷ್ಟಿಸುವ ಒತ್ತಡ ಮನೋದೈಹಿಕ ಸಮಸ್ಯೆಗಳನ್ನು ಸೃಷ್ಟಿಸುತ್ತದೆ. ಇದರ ಪರಿಣಾಮ ಜೀವನಶೈಲಿ ಸಂಬಂಧಿಸಿದ ಕಾಯಿಲೆಗಳ ಪ್ರಮಾಣ ದಿನೇದಿನೆ ಹೆಚ್ಚುತ್ತಿವೆ. ಒತ್ತಡದಿಂದ ಉಂಟಾಗುವ ಕಾಯಿಲೆಗಳಿಂದ ದೂರವಿರಲು ಪ್ರಾಥಮಿಕ ಹಂತದಲ್ಲೇ ಒತ್ತಡವನ್ನು ನಿಭಾಯಿಸಿ.ಒತ್ತಡಕ್ಕೆ ಒಳಗಾದಾಗ ಸಕಾರಾತ್ಮಕ ಆಲೋಚನೆಗಳನ್ನು ಬೆಳೆಸಿಕೊಳ್ಳಿ.ಮಾನಸಿಕ ಮತ್ತು ದೈಹಿಕವಾಗಿ ಆಗಾಗ ವಿಶ್ರಾಂತಿ ತೆಗೆದುಕೊಳ್ಳುವುದು ಬಹಳ ಮುಖ್ಯ.
ಬಿಡುವಿನ ಸಮಯದಲ್ಲಿ ಯಾವುದಾದರೂ ಸೃಜನಶೀಲ ಮತ್ತು ಮನಸ್ಸಿಗೆ ಮುದ ಮತ್ತು ತೃಪ್ತಿಯನ್ನು ನೀಡುವ ಕೆಲಸಗಳಲ್ಲಿ ತೊಡಗಿಕೊಳ್ಳಿ.ಪ್ರತಿಯೊಬ್ಬರನ್ನು ನಗು-ನಗುತ್ತಾ ಆತ್ಮೀಯತೆಯಿಂದ ಮಾತನಾಡಿ ದ್ವೇಷ ಭಾವನೆಯನ್ನು ನಮ್ಮಿಂದ ತೆಗೆದು ಹಾಕಿ ಪ್ರತಿಯೊಬ್ಬರಲ್ಲೂ ಸ್ನೇಹ ಭಾವನೆಯನ್ನು ಹೊಂದುವುದು.
ಧ್ಯಾನ ಮಾಡುವಂಥದ್ದು ಮುಖ್ಯ. ಕನಿಷ್ಠ 5 ನಿಮಿಷಗಳವರೆಗಾದರೂ ದೀರ್ಘವಾಗಿ ಉಸಿರಾಡಿ.” ಎಂದು ಸಲಹೆ ನೀಡಿದರು. ಸ್ವಯಂಸೇವಕರಿಗೆ ಹಲವು ಚಟುವಟಿಕೆಗಳನ್ನು ನೀಡಿ ಉತ್ಸಾಹದಿಂದ ಭಾಗವಹಿಸುವಂತೆ ಮಾಡಿದರು.
ಅಧ್ಯಕ್ಷತೆಯನ್ನು ವಹಿಸಿದ್ದ ಕೆನರಾ ಕಾಲೇಜಿನ ಪ್ರಾಂಶುಪಾಲರಾದ ಡಾ. ಪ್ರೇಮಲತಾ ವಿ. ಅವರು ಕೋವಿಡ್-೧೯ ಸಮಯದಲ್ಲಿ ಮನಸ್ಥಿತಿಯನ್ನು ಶಾಂತ ರೀತಿಯಿಂದ ಇರಿಸಿಕೊಳ್ಳಲು ವಿಧವಿಧವಾದ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿ ಕೊಳ್ಳಬೇಕೆಂಬ ತಿಳುವಳಿಕೆಯ ನುಡಿಗಳ್ಳನ್ನಾಡಿದರು.

ಕೆನರಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಸೀಮಾ ಪ್ರಭು.ಎಸ್ ಕಾರ್ಯಾಗಾರದ ಆಯೋಜಕರಾಗಿದ್ದರು. ಸ್ವಯಂ ಸೇವಕಿ ಯುಕ್ತ ಕರ್ಕೇರ ಕಾರ್ಯಕ್ರಮ ನಿರ್ವಹಿಸಿದರು. ಸ್ವಯಂಸೇವಕಿ ದಿವ್ಯಶ್ರೀ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು