1:35 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಬೆಳ್ವೆ ಚರ್ಚ್ ಫಾದರ್ ವಿರುದ್ಧ ಅನುಯಾಯಿಗಳಿಂದ ಪ್ರತಿಭಟನೆ: ಕ್ರೈಸ್ತ ಧರ್ಮದಿಂದ ಮತಾಂತರ ಎಚ್ಚರಿಕೆ

25/10/2021, 08:34

ಕುಂದಾಪುರ(reporterkarnataka.com): ಬೆಳ್ವೆಯ ಚರ್ಚ್ ನ ಫಾದರ್ ವಿರುದ್ದ ಚರ್ಚ್ ಅನುಯಾಯಿಗಳು ಅಸಮಾಧಾನ ಹೊರ ಹಾಕಿ ಭಾನುವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕರುಣಾಕರ್ ಶೆಟ್ಟಿ, ಇದು ಕೇವಲ ಒಂದು ಧರ್ಮದ ವಿಚಾರವಲ್ಲ. ಸಾಮರಸ್ಯದಿಂದ ಇರುವ ಚರ್ಚಿನ ಅನುಯಾಯಿಗಳಿಗೆ ತೊಂದರೆ ಆದರೆ ಬೆಳ್ವೆ ಗ್ರಾಮದ ಪ್ರತಿಯೊಬ್ಬರು ಇವರ ಪರ ನಿಲ್ಲುತ್ತಾರೆ. ಇವರಿಗೆ ತೊಂದರೆ ನೀಡುತ್ತಿರುವ ಫಾದರ್ ಅಲೆಕ್ಸಾಂಡರ್ ಲೂವೀಸ್ ಈ ಹಿಂದೆ ತಲ್ಲೂರಿನಲ್ಲಿ ಗಲಾಟೆ ಮಾಡಿಕೊಂಡು ಬಂದು ಇಲ್ಲಿಗೆ ವರ್ಗಾವಣೆಗೊಂಡವರು. ಇಲ್ಲಿಯೂ ಅದೇ ಸಮಸ್ಯೆಯನ್ನು ಹುಟ್ಟುಹಾಕುತ್ತಿದ್ದಾರೆ ಎಂದರು.

ಚರ್ಚ್ ನ ಅನುಯಾಯಿ ಪ್ರವೀಣಾ ಮಾತನಾಡಿ, ಕಳೆದ ಮೂರು ತಿಂಗಳಿನಿಂದ ಇಲ್ಲಿ ಅಶಾಂತಿ ನೆಲೆಸಿದೆ. ಫಾದರ್ ಅಲೆಗ್ಸಾಂಡರ್ ಲೂವಿಸ್ ನಮಗೆ ಚರ್ಚ್ ನ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಿಡುತ್ತಿಲ್ಲ. ನಾವು ಕಟ್ಟಿದ ಚರ್ಚ್ ನ ಕಟ್ಟಡಕ್ಕೆ ಹಾನಿ ಮಾಡುತ್ತಿದ್ದಾರೆ. ಉಡುಪಿ ಧರ್ಮಾಧ್ಯಕ್ಷರಿಗೆ ಮನವಿ ಮಾಡಿದರೇ ನಮಗೆ ನ್ಯಾಯ ದೊರಕಿಸಿ ಕೊಡಲಿಲ್ಲ. ಒಂದು ವೇಳೆ ವಾರದೊಳಗೆ ಅಲೆಗ್ಸಾಂಡರ್ ಅನ್ನು ವರ್ಗಾವಣೆ ಮಾಡದೇ ಇದ್ದರೇ ನಾವು ಕ್ರಿಶ್ಚಿಯನ್ ಧರ್ಮವನ್ನು ಬಿಟ್ಟು ಹೋಗುತ್ತೇವೆ ಎಂದರು.

ಇತ್ತೀಚಿನ ಸುದ್ದಿ

ಜಾಹೀರಾತು