7:33 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೆಂಪು ಕುಚಲಕ್ಕಿ ಬೇಡಿಕೆ: ದ.ಕ., ಉಡುಪಿ ಜಿಲ್ಲೆಗೆ ವಾರ್ಷಿಕ ಬೇಕು 12 ಲಕ್ಷ ಕ್ವಿಂಟಾಲ್ ; ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಕೆಗೆ ನಿರ್ಧಾರ

28/05/2021, 07:39

ಬೆಂಗಳೂರು(reporterkarnataka news) : ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಸಾರ್ವಜನಿಕ ಪಡಿತರ ವ್ಯವಸ್ಥೆಯಲ್ಲಿ ಕುಚಲಕ್ಕಿ ವಿತರಿಸಲು ಕೇಂದ್ರ ಸರಕಾರದಿಂದ ಅನುಮತಿ ಪಡೆಯಲು ಪ್ರಸ್ತಾಪನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಯಿತು.

ವಿಧಾನ ಸೌಧದ ಸಮ್ಮೇಳನ ಸಭಾಂಗಣದಲ್ಲಿ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಇಲಾಖೆ ಸಚಿವ ಉಮೇಶ್ ಕತ್ತಿ ಅವರ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು.

ಉಭಯ ಜಿಲ್ಲೆಗಳಲ್ಲಿ ಪಡಿತರ ಅಕ್ಕಿ ಪಡೆಯುವ ಜನಸಾಮಾನ್ಯರಿಗೆ ಪಡಿತರದ ಮೂಲಕ ಸ್ಥಳೀಯ ಕೆಂಪು ಕುಚ್ಚಲಕ್ಕಿ ವಿತರಿಸಬೇಕೆಂದು ಪ್ರಸ್ತಾವನೆ ಬಂದಿದೆ. 

ಅವಳಿ ಜಿಲ್ಲೆಗಳ ಒಟ್ಟು ಕೆಂಪು ಕುಚ್ಚಲಕ್ಕಿಯ ಬೇಡಿಕೆ, ಸುಮಾರು ವಾರ್ಷಿಕ 12 ಲಕ್ಷ ಕ್ವಿಂಟಾಲ್ ಆಗಿದ್ದು, ಕೆಂಪು ಕುಚ್ಚಲಕ್ಕಿ ಪೂರೈಸಲು ರಾಜ್ಯದ ಬತ್ತದ ತಳಿಗಳಾದ ಎಂ ಒ 4, ಜಯ, ಅಭಿಲಾಷ, ಭದ್ರ ಕಜೆ, ಜ್ಯೋತಿ ಮುಂತಾದ ತಳಿಗಳನ್ನು ಖರೀದಿಸಲು ಕೇಂದ್ರ ಸರ್ಕಾರದ ಅನುಮತಿಗಾಗಿ ಸಭೆ ನಡೆಯಿತು. ಸುದೀರ್ಘ ಚರ್ಚೆಯ ಬಳಿಕ ಕೇಂದ್ರದ ಅನುಮತಿ ಪಡೆಯಲು ಅಗತ್ಯ ಪ್ರಸ್ತಾವನೆ ಸಲ್ಲಿಸುವ ಕುರಿತು ನಿರ್ಣಯ ಕೈಗೊಳ್ಳಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು