4:04 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಲೈಂಗಿಕ ಕಿರುಕುಳ ಪ್ರಕರಣದ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕಾರ: ಬೊಂದೇಲ್ ನಿವಾಸಿಯ ಬಂಧನ; ತೀವ್ರ ವಿಚಾರಣೆ

28/10/2021, 16:19

ಮಂಗಳೂರು(reporterkarnataka.com)ನಗರದ ಕಾನೂನು ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ವಕೀಲ ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ ಆರೋಪದಲ್ಲಿ ನಗರದ ಬೋಂದೆಲ್ ನಿವಾಸಿ ಕೆ. ಅನಂತ ಭಟ್ ಎಂಬವರನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಲೈಂಗಿಕ ಕಿರುಕುಳದ ಆರೋಪಿ ರಾಜೇಶ್ ಭಟ್ ನೊಂದಿಗೆ ನಿರಂತರವಾಗಿ ಸಂಪರ್ಕದಲ್ಲಿದ್ದ 48ರ ಹರೆಯದ ಅನಂತ್ ಭಟ್ ಅವರು
ರಾಜೇಶ್ ಭಟ್ ತಲೆಮರೆಸಿಕೊಳ್ಳಲು ಸಹಕರಿಸಿದ್ದರು ಎಂದು ಆರೋಪಿಸಲಾಗಿದೆ.

ರಾಜೇಶ್ ಭಟ್’ಗೆ ಸೇರಿದ ಕಾರು, ಫೋನ್ ಸಹ ಅಜ್ಞಾತ ಸ್ಥಳದಲ್ಲಿಟ್ಟು ಪೊಲೀಸರ ತನಿಖೆಯನ್ನು ಹಾದಿ ತಪ್ಪಿಸಲು ಅನಂತ್ ಭಟ್ ಯತ್ನಿಸಿದ್ದರು ಎಂಬ ಆರೋಪ ಕೇಳಿ ಬಂದಿದೆ.ಅನಂತ್ ಭಟ್ ಅವರನ್ನು ಇದೀಗ ಪೊಲೀಸರು  ತೀವ್ರ ವಿಚಾರಣೆಗೆ ಗುರಿಪಡಿಸಿದ್ದಾರೆ.

ಇಂಟರ್ನ್‌ಶಿಪ್ ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿ ಈವರೆಗೂ ವಕೀಲ ರಾಜೇಶ್ ಭಟ್ ಪತ್ತೆಯಾಗಿಲ್ಲ. 

ಸದ್ಯ ರಾಜೇಶ್ ತಪ್ಪಿಸಿಕೊಳ್ಳಲು ಬಳಸಿದ್ದ ಕಾರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ರಾಜೇಶ್ ಅವರನ್ನು ಬೇರೆ ಸ್ಥಳದಲ್ಲಿ ಬಿಟ್ಟು ಬಂದಿರುವುದಾಗಿ ಅನಂತ್ ಮಾಹಿತಿ ನೀಡಿದ್ದು ಅಲ್ಲಿ ಬೇರೆ ಕಾರು, ಮೊಬೈಲ್, ಸಿಮ್ ಬಳಸುತ್ತಿರುವ ಬಗ್ಗೆ ಅನಂತ್ ವಿಚಾರಣೆ ವೇಳೆ ಮಾಹಿತಿ ಬಹಿರಂಗ ಪಡಿಸಿದ್ದಾರೆ ಎಂದು ತಿಳಿದು ಬಂದಿದೆ

ಇತ್ತೀಚಿನ ಸುದ್ದಿ

ಜಾಹೀರಾತು