1:15 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಆದಾಯಕ್ಕಿಂತ ಹೆಚ್ಚಿನ ಸಂಪಾದನೆ: ಪಾಲಿಕೆ ಸಹಾಯಕ ನಗರ ಯೋಜನಾಧಿಕಾರಿ ಮಂಜುನಾಥ ಸ್ವಾಮಿಗೆ 5 ವರ್ಷ ಸಜೆ, 35 ಲಕ್ಷ ದಂಡ

28/10/2021, 23:32

ಮಂಗಳೂರು(reporterkarnataka.com): ಮಂಗಳೂರು ಮಹಾನಗರಪಾಲಿಕೆಯ ಅಧಿಕಾರಿಗಳ ಭ್ರಷ್ಟಾಚಾರದ ಕರ್ಮಕಾಂಡ ನ್ಯಾಯಾಲಯದ ತೀರ್ಪಿನ ಮೂಲಕ ಒಂದೊಂದಾಗಿ ಹೊರಬರುತ್ತಿದೆ. ಆದಾಯಕ್ಕಿಂತ ಹೆಚ್ಚಿನ ಸಂಪಾದನೆ ಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಪಾಲಿಕೆಯ ಸಹಾಯಕ ನಗರ ಯೋಜನಾಧಿಕಾರಿ ಎಸ್.ಇ. ಮಂಜುನಾಥ ಸ್ವಾಮಿಗೆ 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯ 5 ವರ್ಷ ಸಜೆ ಮತ್ತು 35 ಲಕ್ಷ ರೂ. ದಂಡ ವಿಧಿಸಿ ತೀರ್ಪು ನೀಡಿದೆ.

ಕೆಲವು ತಿಂಗಳ ಹಿಂದೆಯಷ್ಟೇ ಇಂತಹದ್ದೇ ಪ್ರಕರಣದಲ್ಲಿ ಪಾಲಿಕೆಯ ಅಸಿಸ್ಟೆಂಟ್ ಟೌನ್ ಪ್ಲಾನಿಂಗ್ ಆಫೀಸರ್ ಶಿವರಾಜ್ ಗೆ ನ್ಯಾಯಾಲಯ ಶಿಕ್ಷೆ ವಿಧಿಸಿ ತೀರ್ಪು ನೀಡಿತ್ತು. ಇದೀಗ ಆದಾಯಕ್ಕಿಂತ ಹೆಚ್ಚು ಸಂಪಾದನೆ ಆರೋಪದ ಮೇಲೆ ಮಂಜುನಾಥ ಸ್ವಾಮಿಗೆ ಸಜೆ ನೀಡಲಾಗಿದೆ.

ಆದಾಯಕ್ಕಿಂತ ಹೆಚ್ಚಿನ ಸಂಪಾನೆಯ ಆರೋಪದ ಹಿನ್ನೆಲೆಯಲ್ಲಿ ಮಂಗಳೂರು ಲೋಕಾ ಯುಕ್ತ ಪೊಲೀಸರು 2007ರಲ್ಲಿ ಮಂಜುನಾಥ ಸ್ವಾಮಿ ಅವರ ಮನೆ ಹಾಗೂ ಕಚೇರಿಗೆ ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದರು.

ಈ ಕುರಿತು 3ನೇ ಹೆಚ್ಚುವರಿ ಜಿಲ್ಲಾ ಸತ್ರ ಮತ್ತು ನ್ಯಾಯಾಲಯದ ನ್ಯಾಯಾಧೀಶರಾದ ಬಿ.ಬಿ. ಜಕಾತಿ ಸಮಗ್ರ ವಿಚಾರಣೆ ನಡೆಸಿದ್ದರು. ಇದೀಗ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ ತೀರ್ಪು ನೀಡಿದ್ದಾರೆ. ಅಪರಾಧಿಗೆ 5 ವರ್ಷ ಸಾದಾ ಸಜೆ ಹಾಗೂ 35 ಲಕ್ಷ ರೂ. ದಂಡ ವಿಧಿಸಿದ್ದಾರೆ. ದಂಡ ಕಟ್ಟಲು ವಿಫಲವಾದಲ್ಲಿ ಮತ್ತೆ 1ವರ್ಷಗಳ ಸಾದಾ ಸಜೆ ಅನುಭವಿಸಬೇಕಾಗಿದೆ ಎಂದು ತೀರ್ಪುನಲ್ಲಿ ತಿಳಿಸಿದ್ದಾರೆ.

ಲೋಕಾಯುಕ್ತ ಇನ್‌ಸ್ಪೆಕ್ಟರ್ ಆಗಿದ್ದ ಪ್ರಸನ್ನ ವಿ. ರಾಜು ದೂರು ನೀಡಿದ್ದು, ಲೋಕಾಯುಕ್ತ ಡಿವೈಎಸ್ಪಿ ಆಗಿದ್ದ ಸದಾನಂದ ವರ್ಣೇಕರ್ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು