3:18 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉಪನ್ಯಾಸಕಿ ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಲೋಕಾರ್ಪಣೆ

29/10/2021, 16:40

ಕಾರ್ಕಳ(reporterkarnataka.com): ನಿಟ್ಟೆ ಡಾ. ಎನ್. ಎಸ್. ಎ.ಎಂ. ಪದವಿಪೂರ್ವ ಕಾಲೇಜಿನ ಕನ್ನಡ ಉಪನ್ಯಾಸಕಿ  ಶ್ರೀ ಮುದ್ರಾಡಿ ಅವರ ಚೊಚ್ಚಲ ಕವನ ಸಂಕಲನ ‘ಇಲ್ಲಗಳ ನಡುವೆ’ ನವೆಂಬರ್ 1ರಂದು ಬಿಡುಗಡೆಗೊಳ್ಳಲಿದೆ.

ಕೃತಿಯನ್ನು ನವೆಂಬರ್  1ರಂದು ಕರ್ನಾಟಕ ರಾಜ್ಯ ಫೆಡರೇಶನ್ ಆಫ್ ಕರ್ನಾಟಕ ಕ್ವಾರಿ ಸ್ಟೋನ್ ಕ್ರಷರ್ಸ್ ಓನರ್ಸ್ ಅಸೋಸಿಯೇಶನ್ ರಾಜ್ಯಾಧ್ಯಕ್ಷ ರವೀಂದ್ರ ಶೆಟ್ಟಿ ಬಜಗೋಳಿ ಅವರ ನಿವಾಸ ಎಸ್.ಪಿ. ಗಾರ್ಡನ್ ನಲ್ಲಿ ಪ್ರೇಮಾ ಸಾಧು ಶೆಟ್ಟಿ ಅವರು ಬಿಡುಗಡೆ ಮಾಡಲಿದ್ದಾರೆ. ಕಾರ್ಕಳದ ಹೊಸ ಸಂಜೆ ಪ್ರಕಾಶನದ ಹೆಮ್ಮೆಯ ಕೃತಿ ಇದಾಗಿದೆ.

ಕನ್ನಡ ಉಪನ್ಯಾಸಕಿಯಾದ ಶ್ರೀ ಮುದ್ರಾಡಿ ಅವರು ಪ್ರಸಿದ್ಧ ಸಾಹಿತಿ, ವಿಮರ್ಶಕ, ಅಷ್ಟಾವಧಾನಿ, ಹರಿದಾಸ ಹೀಗೆ ಬಹು ಕ್ಷೇತ್ರಗಳಲ್ಲಿ ಪಾಂಡಿತ್ಯ ಹೊಂದಿದ ಅಂಬಾತನಯ ಮುದ್ರಾಡಿ ಅವರ ಪುತ್ರಿ. ಶ್ರೀ ಮುದ್ರಾಡಿ ಅವರು ಮೂಲತಃ ಪತ್ರಕರ್ತೆ. ಅವರು ಮುಂಗಾರು ಪತ್ರಿಕೆಯಲ್ಲಿ ಉಪ ಸಂಪಾದಕಿಯಾಗಿ ಕಾರ್ಯನಿರ್ವಹಿಸಿದ್ದರು. ನಂತರ ಪತ್ರಿಕಾರಂಗದಿಂದ ಶಿಕ್ಷಣ ಕ್ಷೇತ್ರಕ್ಕೆ ಕಾಲಿಟ್ಟರು. ಶೈಕ್ಷಣಿಕ ಅಧ್ಯಯನಕ್ಕಾಗಿ ಸ್ಕಾಟ್ ಲ್ಯಾಂಡ್ ಗೆ ಕೂಡ ಹೋಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು