7:37 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಬೆಳ್ಮಣ್: ರೇಶನ್ ನಲ್ಲಿ ಕಲಬೆರಕೆಯ ಅಕ್ಕಿ ವಿತರಣೆ; ತನಿಖೆಗೆ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಆಗ್ರಹ

28/05/2021, 14:51

ಡಿ.ಆರ್ .ಜಗದೀಶ್ ದೇವಲಾಪುರ ನಾಗಮಂಗಲ

info.reporterkarnataka@gmail.com

ರಾಜ್ಯದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೆಳ್ಮಣ್ ಗ್ರಾಮ ವ್ಯಾಪ್ತಿಯಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಸೇರಿಸಿ ವಿತರಿಸಿದ್ದು, ತಕ್ಷಣ ಉತ್ತಮ ಅಕ್ಕಿ ನೀಡಬೇಕು ಹಾಗೂ ಈ ಕುರಿತು ಸಮಗ್ರ ತನಿಖೆ ನಡೆಸಬೇಕೆಂದು ರಾಜ್ಯ ಪಡಿತರ ಚೀಟಿ ಸಂಘದ ರಾಜ್ಯಾಧ್ಯಕ್ಷ ಕೆ. ಕೃಷ್ಣಪ್ಪ ಅವರು ಆಗ್ರಹಿಸಿದ್ದಾರೆ. 

ಅವರಿಂದು ಮಾಧ್ಯಮದೊಂದಿಗೆ ಮಾತನಾಡುತ್ತ ರಾಜ್ಯದ ಕಾರ್ಕಳ ತಾಲ್ಲೂಕಿನ ಬೆಳ್ಮಣ್ ಗ್ರಾಮದಲ್ಲಿ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಕಲಬೆರಿಕೆಯಾಗಿ ಗ್ರಾಹಕರಿಗೆ ಈಗಾಗಲೇ ನೀಡಿದ್ದು, ಗ್ರಾಮದ ಜನತೆ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಗಮನಿಸಿ ಆತಂಕ ವ್ಯಕ್ತಪಡಿಸಿದ್ದಾರೆ. ಆಹಾರ ಇಲಾಖೆ ಈ ರೀತಿ ಪೂರೈಸಿರುವುದು ಹಾಗೂ ಖರೀದಿ ಮಾಡಿರುವುದು ಎಲ್ಲಿಂದ ಹಾಗೂ ಯಾವ ಸಹಕಾರ ಸಂಘ ಖರೀದಿ ಮಾಡಿದ್ದು  ಎಂಬ ಬಗ್ಗೆ ತನಿಖೆ ಮಾಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯ ಸರ್ಕಾರ ಆಹಾರ ಇಲಾಖೆ ಸಂಬಂಧಪಟ್ಟ ಮಂತ್ರಿ ಯಾವುದೇ ಕ್ರಮ ಕೈಗೊಳ್ಳದೆ ಮೌನವಹಿಸಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ರಾಜ್ಯದಲ್ಲಿ ವಿವಿಧಡೆ ಕಲಬೆರಕೆಯ ಇಂತಹ ಪ್ರಕರಣದ ದೂರುಗಳು ಬಂದರೂ ಸಂಬಂಧಪಟ್ಟ ಇಲಾಖೆ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು