1:39 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಉಡುಪಿ: ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯಲ್ಲಿ ಕೊನೆಗೂ ಯಕ್ಷಗಾನಕ್ಕೆ ಪ್ರಾತಿನಿಧ್ಯ; ಇಬ್ಬರು  ಲಿಸ್ಟ್ ನಿಂದ ಔಟ್

31/10/2021, 23:10

ಉಡುಪಿ(reporterkarnataka.com): ಅ.30ರಂದು ಜಿಲ್ಲಾಡಳಿತ ಪ್ರಕಟಿಸಿದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾದ 35 ಮಂದಿಯ ಪಟ್ಟಿಯಲ್ಲಿ ಯಕ್ಷಗಾನ ಹಾಗೂ ಕೃಷಿ ಕ್ಷೇತ್ರದಲ್ಲಿ ಯಾರೊಬ್ಬರನ್ನೂ ಪರಿಗಣಿಸಿಲ್ಲ ಎಂದು

ಸಾಮಾಜಿಕ ಜಾಲತಾಣ ಗಳಲ್ಲಿ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಇದರಿಂದ ಜಿಲ್ಲಾಡಳಿತ ತರಾತುರಿಯಲ್ಲಿ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ ಪ್ರಕಟಿಸಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಇಬ್ಬರನ್ನು ಕೈಬಿಟ್ಟು ಯಕ್ಷಗಾನ ಸಹಿತ ಎರಡು ಕ್ಷೇತ್ರಗಳಿಗೆ ಇಬ್ಬರನ್ನು ಹೊಸದಾಗಿ ಸೇರ್ಪಡೆಗೊಳಿಸಿ ಒಟ್ಟು 35 ಮಂದಿಯ ಪಟ್ಟಿಯನ್ನು ಪ್ರಕಟಿಸಲಾಗಿದೆ.

ಯಕ್ಷಗಾನ ಕ್ಷೇತ್ರದಲ್ಲಿ ಶ್ರೀಧರ್ ಗಾಣಿಗ ಉಪ್ಪುಂದ ಹಾಗೂ ಸಂಕೀರ್ಣ ಕ್ಷೇತ್ರದಲ್ಲಿ ಮಣೂರು ಮಧುಸೂದನ್ ಬಾಯರಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಹಿಂದಿನ ಪಟ್ಟಿಯಲ್ಲಿದ್ದ ಯೋಗ ಕ್ಷೇತ್ರದ ಕೆ.ನರೇಂದ್ರ ಕಾಮತ್ ಪೆರ್ವಾಜೆ ಹಾಗೂ ಸಮಾಜ ಸೇವೆ ಕ್ಷೇತ್ರದ ನಾಗರಾಜ್ ಪುತ್ರನ್ ಕೋಟತಟ್ಟು ಅವರ ಹೆಸರನ್ನು ಕೈಬಿಡಲಾಗಿದೆ. ಮೊದಲ ಪಟ್ಟಿಯಲ್ಲಿದ್ದ ಮಹಾಬಲ ಸುವರ್ಣ ಹಾಗೂ ಪೂವಪ್ಪ ಪೂಜಾರಿ ಅವರಿಗೆ ದೈವರಾಧನೆ ಕ್ಷೇತ್ರವನ್ನು ಕೈಬಿಟ್ಟು ಸಂಕೀರ್ಣ ಕ್ಷೇತ್ರ ಎಂಬುದಾಗಿ ಬದಲಾಯಿಸಲಾಗಿದೆ. ಅದೇ ರೀತಿ ಕುಷ್ಟ ಕೊರಗ ಅವರಿಗೆ ಕಲೆಯ ಬದಲು ಕರಕುಶಲ ಕ್ಷೇತ್ರದಲ್ಲಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು