6:51 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕೊರೊನಾದಿಂದ ತತ್ತರಿಸಿರುವ ದೇಶದ ಆರ್ಥಿಕ ಪುನಶ್ಚೇತನಕ್ಕೆ ಕರೆನ್ಸಿ ಮುದ್ರಣ ಅಗತ್ಯ ಎಂದ ಬ್ಯಾಂಕರ್ ಉದಯ್ ಕೋಟಕ್

28/05/2021, 15:16

ನವದೆಹಲಿ(reporterkarnataka news)  ಕೋವಿಡ್ ಸಾಂಕ್ರಾಮಿಕದಿಂದಾಗಿ ನಲುಗಿರುವ ದೇಶದ ಆರ್ಥಿಕತೆಗೆ  ಪುನಶ್ಚೇತನ ನೀಡುವ ಉದ್ದೇಶದಿಂದ ಭಾರತ ಕರೆನ್ಸಿ ನೋಟುಗಳನ್ನು ಮುದ್ರಿಸುವ ಅಗತ್ಯವಿದೆ. ಆರ್‍ಬಿಐನ ಬೆಂಬಲದೊಂದಿಗೆ ವಿತ್ತೀಯ ವಿಸ್ತರಣೆ ಅಥವಾ ಹಣ ಮುದ್ರಿಸುವ ಅಗತ್ಯವಿದೆ. ಈಗ ಆ ಕ್ರಮ ಕೈಗೊಳ್ಳದಿದ್ದರೆ ಮತ್ತಿನ್ಯಾವಾಗ ಮಾಡುವುದು ?ಎಂದು ದೇಶದ ಪ್ರತಿಷ್ಠಿತ ಬ್ಯಾಂಕರ್ ಆಗಿರುವ ಉದಯ್ ಕೋಟಕ್ ಪ್ರಶ್ನಿಸಿದ್ದಾರೆ.

ಖಾಸಗಿ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು,ನನ್ನ ಅಭಿಪ್ರಾಯದಂತೆ ಸರಕಾರದ ಬ್ಯಾಲೆನ್ಸ್ ಶೀಟ್ ವಿಸ್ತರಿಸುವ ಸಮಯ ಇದಾಗಿದೆ ಎಂದರು.

ಬಡವರಿಗೆ ನೇರ ನಗದು ವರ್ಗಾವಣೆಗೆ  ಸರಕಾರ ಜಿಡಿಪಿಯ ಶೇ1ರಷ್ಟು  ಅಥವಾ ರೂ 1 ಲಕ್ಷ ಕೋಟಿಯಿಂದ ರೂ 2 ಲಕ್ಷ ಕೋಟಿ ತನಕ ಹಣ ವ್ಯಯಿಸಬೇಕು. ಇದು  ಸಮಾಜದ ಕೆಳಸ್ತರದಲ್ಲಿರುವ ಜನರಿಗೆ ಬಲ ನೀಡಲಿದೆ. ಬಡವರಲ್ಲಿ ಅತ್ಯಂತ ಬಡವರಿಗೆ ವೈದ್ಯಕೀಯ ಸವಲತ್ತುಗಳನ್ನು ಒದಗಿಸಬೇಕು ಎಂದು ಉದಯ್ ಕೋಟಕ್  ನುಡಿದರು.

ಇತ್ತೀಚಿನ ಸುದ್ದಿ

ಜಾಹೀರಾತು