12:44 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಆಡಳಿತರೂಢ ಬಿಜೆಪಿಗೆ ಸ್ವಲ್ಪ ಸಿಹಿ, ಸ್ವಲ್ಪ ಕಹಿ: ಸಿಂದಗಿಯಲ್ಲಿ ಕೇಸರಿಗೆ ಗೆಲುವು; ಹಾನಗಲ್ ನಲ್ಲಿ ಕಾಂಗ್ರೆಸ್ ಗೆ ಜಯ

02/11/2021, 16:03

ಬೆಂಗಳೂರು(reporterkarnataka.com): ರಾಜ್ಯದ ಎರಡು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಆಡಳಿತರೂಢ ಬಿಜೆಪಿಗೆ ಒಂದೆಡೆ ಖುಷಿಯಾದರೆ ಇನ್ನೊಂದೆಡೆ ದುಃಖದ ಫಲಿತಾಂಶ ಹೊರಬಿದ್ದಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮೊದಲ ಅಗ್ನಿಪರೀಕ್ಷೆ ಇದಾಗಿತ್ತು.

ಎರಡು ಕ್ಷೇತ್ರಗಳಿಗೆ ನಡೆದ ಉಪ ಚುನಾವಣೆಯಲ್ಲಿ ಸಿಂದಗಿ ಕ್ಷೇತ್ರದಿಂದ ಆಡಳಿತರೂಢ ಬಿಜೆಪಿ ಗೆಲುವು ಸಾಧಿಸಿದರೆ, ಹಾನಗಲ್ ಕ್ಷೇತ್ರದಲ್ಲಿ ಕೇಸರಿ ಪಕ್ಷ ಕಾಂಗ್ರೆಸ್ ಎದುರು ಸೋಲು ಅನುಭವಿಸಿದೆ.

ಸಿಂದಗಿ ಕ್ಷೇತ್ರದಲ್ಲಿ ಜೆಡಿಎಸ್ ಮಾಜಿ ಸಚಿವ ಎಂ.ಸಿ. ಮನಗೂಳಿ ಅವರ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಸಿಂದಗಿಯಲ್ಲಿ ಕಾಂಗ್ರೆಸ್ ನಿಂದ ಮನಗೂಳಿ ಪುತ್ರ ಅಶೋಕ್ ಮನಗೂಳಿ ಸ್ಪರ್ಧಿಸಿದ್ದಾರೆ.

ಬಿಜೆಪಿಯಿಂದ ರಮೇಶ್ ಭೂಸನೂರು, ಜೆಡಿಎಸ್ ನಿಂದ ನಾಜಿಯಾ ಅಂಗಡಿ ಸೇರಿದಂತೆ 6 ಅಭ್ಯರ್ಥಿಗಳು ಕಣದಲ್ಲಿದ್ದರು.

ಹಾನಗಲ್ ಕ್ಷೇತ್ರದಲ್ಲಿ ಸಿ.ಎಂ. ಉದಾಸಿ ಅವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿಯ ಶಿವರಾಜ್ ಸಜ್ಜನರ ಅವರು ಕಾಂಗ್ರೆಸ್ ಶ್ರೀನಿವಾಸ್ ಮಾನೆ ಎದುರು ಸೋಲು ಅನುಭವಿಸಿದ್ದಾರೆ. ಜೆಡಿಎಸ್ ನಿಂದ ನಿಯಾಜ್ ಶೇಕ್ ಸ್ಪರ್ಧಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು