4:09 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಆಯುರ್ವೇದಕ್ಕೆ ಇದು ಅಮೃತ ಕಾಲ: ಖ್ಯಾತ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಅಭಿಮತ

02/11/2021, 18:52

ಮಂಗಳೂರು(reporterkarnataka.com): ನಮ್ಮ ಪೂರ್ವಜರು ಸಹಸ್ರಾರು ವರ್ಷಗಳ ಇತಿಹಾಸವುಳ್ಳ ಆಯುರ್ವೇದ ಜೀವನ ಪದ್ಧತಿಗೆ ಮಹತ್ತರ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈಗ ಆಯುರ್ವೇದ ಪದ್ಧತಿಗೆ ಅಮೃತ ಕಾಲವಾಗಿದ್ದು, ದೇಶ ವಿದೇಶಗಳಲ್ಲಿ ಇದು ಅತ್ಯಂತ ಫಲಪ್ರದವೆಂಬ ವಿಶ್ವಾಸ ಮೂಡಿಬರುತ್ತಿದೆ ಎಂದು ಖ್ಯಾತ ಆಯುರ್ವೇದ ವೈದ್ಯ ಡಾ.ಶ್ರೀಪತಿ ಕಿನ್ನಿಕಂಬಳ ಹೇಳಿದರು.

ರಾಷ್ಟ್ರೀಯ ಆಯುರ್ವೇದ ದಿನಾಚರಣೆಯ ಪ್ರಯುಕ್ತ ನಗರದ ವೆನ್ಲಾಕ್ ಆಯುಷ್ ಮಲ್ಟಿ ಸ್ಪೆಶಾಲಿಟಿ ಆಸ್ಪತ್ರೆಯಲ್ಲಿ ಹಮ್ಮಿಕೊಂಡ ವಿಶೇಷ ಕಾರ್ಯಕ್ರಮವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಅವರು ಮಾತನಾಡಿದರು.

ಆಯುಷ್ ಇಲಾಖೆಯು ನಮ್ಮ ಜಿಲ್ಲೆಯಲ್ಲಿ ಉತ್ತಮ ಕಾರ್ಯಕ್ರಮಗಳ ಮೂಲಕ ಸೇವೆ ನೀಡುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್ ಕುಮಾರ್ ಮಾತನಾಡಿ, ಆಯುಷ್ ಇಲಾಖೆಯು ಆರೋಗ್ಯ ಇಲಾಖೆಯ ಜೊತೆಗೆ ಉತ್ತಮ ಬಾಂಧವ್ಯ ಹೊಂದಿದೆ. ಜಿಲ್ಲೆಯ ಅಯುಷ್ ಒಂದೇ ತಂಡವಾಗಿ ಬಹಳ ಉತ್ತಮ ರೀತಿಯಲ್ಲಿ ಸೇವೆಗೈಯುತ್ತಿದೆ. ಕೋವಿಡ್ ಸಂಕಷ್ಟಗಳ ಸಂದರ್ಭದಲ್ಲಿ ಸುಮಾರು 48000 ಜನರ ಕರೆಗಳಿಗೆ ಸ್ಪಂದಿಸಿ ಅವರಿಗೆ ಸೂಕ್ತ ಚಿಕಿತ್ಸಾ ಸಲಹೆ ಹಾಗೂ ಆಯುಷ್ ಇಮ್ಯೂನಿಟಿ ಬೂಸ್ಟರ್ ವಿತರಣೆ ಮಾಡಲಾಗಿದೆ ಎಂದರು.

ಈ ಸಂದರ್ಭದಲ್ಲಿ ಡಾ.ಅಂಬಿಕಾ ನಾಯಕ್ ಅವರು ಆಯುರ್ವೇದಾನುಸಾರ ಆಹಾರ ತಯಾರಿಕೆ ಹಾಗೂ ಸೇವನಾ ವಿಧಾನಗಳ ಬಗ್ಗೆ ಉಪನ್ಯಾಸ ನೀಡಿದರು. ಆಯುರ್ವೇದ ಆಹಾರದ ಬಗ್ಗೆ ವಿಶೇಷ ಪ್ರದರ್ಶನಕ್ಕೆ ಆರೋಗ್ಯ ಇಲಾಖಾಧಿಕಾರಿ ಡಾ.ರಾಜೇಶ್ ಚಾಲನೆ ನೀಡಿದರು. ಆಯುಷ್ ಇಲಾಖೆಯ ಕೋವಿಡ್ ಸೇನಾನಿಗಳನ್ನು ಸನ್ಮಾನಿಸಲಾಯಿತು. ಆಶಾ ಕಾರ್ಯಕರ್ತರಿಗೆ ರೋಗನಿರೋಧಕ ಔಷಧ ಮತ್ತು ಇಮ್ಯೂನಿಟಿ ಬೂಸ್ಟರ್ ಗಳನ್ನು ವಿತರಿಸಲಾಯಿತು.

ಡಾ.ಗೋಪಾಲಕೃಷ್ಣ ನಾಯಕ್, ಶಿಕ್ಷಣ ಇಲಾಖೆಯ ಆಶಾ ನಾಯಕ್, ಡಾ.ಆಶಾ ಜ್ಯೋತಿ ರೈ ಮಾಲಾಡಿ, ಡಾ.ಶ್ರೀದೇವಿ ಭಟ್ ಉಪಸ್ಥಿತರಿದ್ದರು. 

ಜಿಲ್ಲಾ ಆಯುಷ್ ಅಧಿಕಾರಿ ಡಾ.ಮುಹಮ್ಮದ್ ಇಕ್ಬಾಲ್ ಸ್ವಾಗತಿಸಿದರು. ಡಾ.ಶೋಭಾರಾಣಿ ಕಾರ್ಯಕ್ರಮ ನಿರ್ವಹಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು