7:45 PM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಸಾಲು ಸಾಲು ದೀಪಗಳ ಮಾಲೆ, ಆಕಾಶಬುಟ್ಟಿ: ದೀಪಾವಳಿ ಏನಿದರ ಅರ್ಥ?: ನಕರಾತ್ಮದಿಂದ ಸಕರಾತ್ಮವೇ?

03/11/2021, 07:50

ಅಸತೋಮ ಸದ್ಗಮಯ ತಮಸೋಮಾ ಜ್ಯೋತಿರ್ಗಮಯ, ಅರ್ಥಾತ್ ನಮ್ಮ ಜೀವನದ ಕತ್ತಲೆಯನ್ನು ಹೊಡೆದೋಡಿಸಿ ಬೆಳಕನ್ನು ತರಲಿ ಎಂದು ಸಂಭ್ರಮಿಸುವ ಒಂದು ವಿಶೇಷ ಪರ್ವ ದೀಪಾವಳಿ. 

ನಿಶೆಯನ್ನು ಹೊಡೆದೋಡಿಸುವುದು ಎಂಬ ಅರ್ಥವೂ ಇದೆ. ನಮ್ಮ ಮನದ ಋಣಾತ್ಮಕ ಭಾವಗಳನ್ನು ತೊರೆದು ಸಕಾರಾತ್ಮಕನ್ನು ಬೆಳಗಿಸಲು ದೀಪಗಳನ್ನು ಬೆಳಗುತ್ತೇವೆ. ದೀಪಾವಳಿ ಎಂದರೆ ತಕ್ಷಣ ನೆನಪಿಗೆ ಬರುವುದು ಸಾಲು ಸಾಲು ದೀಪಗಳ ಸಾಲು, ಆಕಾಶಬುಟ್ಟಿ, ಪ್ರತಿನಿತ್ಯ ಮನೆಯಲ್ಲಿ ಬೆಳಗುವ ದೀಪ ಜೀವನದ ಆಶೋತ್ತರಗಳ ದ್ಯೋತಕ. 

ನಮ್ಮ ಸಂಸ್ಕೃತಿಯಲ್ಲಿ ಯಾವುದೇ ಶುಭ ಸಮಾರಂಭ ಆರಂಭವಾಗುವುದು ದೀಪ ಬೆಳಗುವ ಮೂಲಕ. ಇಲ್ಲಿ ಬೆಳಕನ್ನು ಜೀವನ ವೃದ್ಧಿಯ ದ್ಯೋತಕವಾಗಿ ಕಾಣುತ್ತೇವೆ. ದೀಪದ ಬೆಳಕು ಯಾವಾಗಲೂ ಊರ್ಧ್ವ ಮುಖಿಯಾಗಿರುತ್ತದೆ. ಅಂದರೆ ನಾವು ದೀಪದಂತೆ ಉರಿದು ಇತರರ ಬಾಳಿಗೆ ಬೆಳಕು ನೀಡಬೇಕೆಂಬುದೇ ಆಶಯ.

ಕಾರ್ತಿಕ ಮಾಸದಲ್ಲಿ ಆಚರಿಸುವ ಈ ಹಬ್ಬದ ಜೊತೆಗೆ ಎಲ್ಲಾ ದೇವಾಲಯಗಳಲ್ಲಿಯೂ ದೀಪೋತ್ಸವವನ್ನು ಹಮ್ಮಿಕೊಳ್ಳಲಾಗುತ್ತದೆ.

ಕಾರ್ತಿಕ ಮಾಸದುದ್ದಕ್ಕೂ ದೀಪೋತ್ಸವವನ್ನು ಆಚರಿಸಲಾಗುತ್ತದೆ.

ಭಾರತೀಯರಾದ ನಮಗೆ ದೀಪ ಎನ್ನುವುದು ಸೂರ್ಯನ ಪುಟ್ಟ ಪ್ರತಿರೂಪದಂತೆ.

ಜ್ಞಾನದ ಸಂಕೇತ ವೈರತ್ವದ ಮೇಲೆ ವಿಜಯ ಗಳಿಸಿದ ಸಂಕೇತ, ಮುಖ್ಯವಾಗಿ ನಮ್ಮೊಳಗಿನ ಎಲ್ಲಾ ದುರ್ಗುಣಗಳನ್ನು ಹೊಡೆದೋಡಿಸಿ ಬೆಳಕನ್ನು ಬೆಳಗಿಸುವ ಹಬ್ಬ.

 ಶ್ರೀರಾಮಚಂದ್ರನ ಪಟ್ಟಾಭಿಷೇಕ ನರಕಾಸುರನ ಸಂಹಾರ ಇದೆಲ್ಲವೂ ನಡೆದದ್ದು ಇದೇ ದಿನದಂದು.

ಒಟ್ಟಿನಲ್ಲಿ ದೀಪಾವಳಿಯೆಂದರೆ ಕರಾಳ ಶಕ್ತಿಗಳನ್ನು ಸಂಹರಿಸಿ ಎಲ್ಲರ ಬದುಕಿನಲ್ಲಿ ಬೆಳಕು ತಂದ ಪರ್ವದಿನ. ಈ ದೀಪಾವಳಿ ನಮಗೆಲ್ಲರಿಗೂ ಸುಖ ಸಮೃದ್ಧಿ ನೆಮ್ಮದಿ ತರಲಿ ಎಂದು ಭಗವಂತನಲ್ಲಿ ಪ್ರಾರ್ಥನೆ.

” ಲೋಕ ಸಮಸ್ತಾ  ಸುಖಿನೋ ಭವಂತು””

✍️

ಇತ್ತೀಚಿನ ಸುದ್ದಿ

ಜಾಹೀರಾತು