6:04 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ರೈತರಿಗೆ ಬಿತ್ತನೆ ಬೀಜ ವಿತರಣೆ ಹಾಗೂ ಬಿತ್ತನೆ ಬಗ್ಗೆ ರೈತ ಸಂಪರ್ಕ ಕೇಂದ್ರದ ಸಹಾಯಕ ನಿರ್ದೇಶಕಿ ಜಯಶ್ರೀ ಹಿರೇಮಠ್ ಸಲಹೆ

29/05/2021, 07:32

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ರೈತ ಸಂಪರ್ಕ ಕೇಂದ್ರ ಅಥಣಿ ಘಟಕದ  ಸಹಾಯಕ ನಿರ್ದೇಶಕರಾದ ಜಯಶ್ರೀ ಹಿರೇಮಠ್ ಅವರು ರೈತರಿಗೆ ಬೀಜ ವಿತರಣೆ ಹಾಗೂ ಬಿತ್ತನೆಯ ಬಗ್ಗೆ ಸಲಹೆ ನೀಡಿದರು.

ಕಾಗವಾಡ, ಅನಂತಪುರ ಮತ್ತು ಐಗಳಿ ಎಂಬ ಹೋಬಳಿಗಳನ್ನು ಒಳಗೊಂಡಿದ್ದು, ಇಲ್ಲಿ ಒಣ ಬೇಸಾಯ ಹಾಗೂ ನೀರಾವರಿ ಬೇಸಾಯವನ್ನು ಕೂಡ ಮಾಡಲಾಗುತ್ತದೆ.

ರೈತರಿಗೆ ಉದ್ದು, ತೊಗರಿ, ಹೆಸರು, ಸೋಯಾಬಿನ್ ಬೀಜಗಳನ್ನು ದಾಸ್ತಾನು ಮಾಡಲಾಗಿದೆ. ಅದೇ ರೀತಿ ಗೋವಿನ ಜೋಳ ಬೀಜವನ್ನು ಕೂಡ ಮುಂದಿನ ಒಂದು ವಾರದಲ್ಲಿ ಸಂಗ್ರಹಣೆ ಮಾಡಲಾಗುವುದು.

ರೈತರಿಗೆ ಬೀಜಗಳ ವಿತರಣೆಯನ್ನು ಈ ಕೊರೊನಾ ಎಂಬ ಮಹಾಮಾರಿ ಇರುವುದರಿಂದ ಜನ ದಟ್ಟನೆ ಮಾಡಬಾರದೆಂದು ನಿಯಮ ಜಾರಿಯಲ್ಲಿರುವ ಕಾರಣ  ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸಮೀಪದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳ ಸಹಯೋಗದಲ್ಲಿ ಸುಮಾರು 14 ಕಡೆ ವಿತರಣಾ ಕೇಂದ್ರವನ್ನು ತೆರೆಯಲಾಗಿದೆ. ರೈತರು ಇದರ ಸದುಪಯೋಗ ಪಡೆದು ಕೊಳ್ಳಬೇಕು.

ಬಿತ್ತನೆಯನ್ನು ಯಾವ ಸಮಯದಲ್ಲಿ ಯಾವ ರೀತಿ ಮಾಡಬೇಕೆಂಬುದನ್ನು ಕೂಡ ಹಂಸ ಟಿವಿ ಕನ್ನಡ ಮಾಧ್ಯಮದ ಮೂಲಕ ರೈತ ಜನರಿಗೆ ತಿಳಿಸಿದರು. 

ಬೀಜ ಪಡೆದುಕೊಳ್ಳಲು  ಆಧಾರ್ ಕಾರ್ಡ್, ಜಮೀನಿನ ಪಹಣಿ ಪತ್ರ ಅಥವಾ ಬ್ಯಾಂಕ್ ಪಾಸ್ ಬುಕ್ ಯಾವದಾರೊಂದು ದಾಖಲೆಯನ್ನು ತರಬೇಕೆಂದು  ಅವರು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು