2:38 PM Thursday6 - November 2025
ಬ್ರೇಕಿಂಗ್ ನ್ಯೂಸ್
ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ… ದೀಪಾಲಂಕೃತ ವಿಧಾನ ಸೌಧ ಈಗ ಟೂರಿಸ್ಟ್ ಎಟ್ರೆಕ್ಷನ್ ಸೆಂಟರ್: ಸ್ಪೀಕರ್ ಖಾದರ್ ನಡೆಗೆ… ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ | ಕೇವಲ‌ ಸಬ್ಸಿಡಿಗಾಗಿ ಸಿನಿಮಾ ಮಾಡಬೇಡಿ; ಒಳ್ಳೆ… ಮಂಡ್ಯ ಜಿಲ್ಲೆಯ 50ಕ್ಕೂ ಹೆಚ್ಚು ಪ್ರಾಥಮಿಕ ಆರೋಗ್ಯ ಕೇಂದ್ರಗಳಿಗೆ ಇಸಿಜಿ ಯಂತ್ರ

ಇತ್ತೀಚಿನ ಸುದ್ದಿ

ಇಂಧನ ಬೆಲೆ ಇಳಿಕೆ ಸಂತಸ ತಂದಿದೆ, ಇದರಲ್ಲಿ ಯಾವುದೇ ರಾಜಕೀಯ ಇಲ್ಲ: ಶಾಸಕ ವೇದವ್ಯಾಸ ಕಾಮತ್

07/11/2021, 13:34

ಮಂಗಳೂರು(reporterkarnataka.com): ಕೇಂದ್ರ ಹಾಗೂ ರಾಜ್ಯ ಇಂಧನ ಮೇಲಿನ ಬೆಲೆ ಇಳಿಕೆ ಮಾಡಿದ ಕ್ರಮ ಶ್ಲಾಾಘನೀಯವಾಗಿದ್ದು, ಇದು ದೀಪಾವಳಿ ವೇಳೆಗೆ ಕೊಡುಗೆಯಾಗಿದೆ. ಇದರಿಂದ ಎಲ್ಲ ಜನತೆಗೆ ಪ್ರಯೋಜನ ಲಭಿಸಿದಂತಾಗಿದೆ. ಇದರಲ್ಲಿ ಸರ್ಕಾರದ ಯಾವುದೇ ರಾಜಕೀಯ ಇಲ್ಲ ಎಂದು ಶಾಸಕ ವೇದವ್ಯಾಾಸ ಕಾಮತ್ ಹೇಳಿದರು.

ಈ ಕುರಿತು ಪತ್ರಿಕಾ ಹೇಳಿಕೆಯಲ್ಲಿ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಅನಿವಾರ್ಯ ಕಾರಣಗಳಿಂದ ಇಂಧನ ಬೆಲೆ ಏರಿಕೆಯಾಗಿತ್ತು. ಇದೀಗ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಸುಂಕವನ್ನು ಕೇಂದ್ರ ಸರ್ಕಾರ ಕಡಿತಗೊಳಿಸಿದೆ. ಇದರಿಂದಾಗಿ ತೈಲ ಬೆಲೆಯಲ್ಲಿ ಗಣನೀಯ ಪ್ರಮಾಣದಲ್ಲಿ ಇಳಿಕೆಯಾಗಿದೆ. ಇದನ್ನು ಬೇರೆಯೇ ರೀತಿಯಲ್ಲಿ ಕಾಂಗ್ರೆಸ್ ಸೇರಿದಂತೆ ವಿಪಕ್ಷಗಳು ವಿನಾ ಕಾರಣ ಟೀಕಿಸುತ್ತಿವೆ. ಇಂಧನ ಬೆಲೆ ಇಳಿಕೆಗೂ ದೇಶದಲ್ಲಿ ನಡೆದ ಉಪಚುನಾವಣೆ ಫಲಿತಾಂಶಗಳಿಗೂ ಯಾವುದೇ ಸಂಬಂಧ ಇಲ್ಲ. ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು
ಹಾಗೂ ಜನತೆಯಲ್ಲಿ ತಪ್ಪು ಅಭಿಪ್ರಾಾಯ ಮೂಡಿಸಲು ಕಾಂಗ್ರೆಸ್ ಹಾಗೂ ವಿಪಕ್ಷಗಳು ಈ ರೀತಿಯ ಅಪಪ್ರಚಾರದಲ್ಲಿ ತೊಡಗಿವೆ. 

ಇದಕ್ಕೆ ಜನತೆ ಕಿವಿಗೊಡಬೇಕಾಗಿಲ್ಲ ಎಂದು ವೇದವ್ಯಾಾಸ ಕಾಮತ್ ವಿನಂತಿಸಿದ್ದಾಾರೆ.

ಇತ್ತೀಚಿನ ಸುದ್ದಿ

ಜಾಹೀರಾತು