9:05 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ಮೂಡಿಗೆರೆಯಲ್ಲಿ ಮಲೆನಾಡಿನ ಭೋಜನ ಸವಿದ ಖ್ಯಾತ ಹಾಸ್ಯ ನಟ ಟೆನಿಸ್ ಕೃಷ್ಣ 

15/11/2021, 10:37

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು
info.reporterkarnataka@gmail.com

ಪ್ರಖ್ಯಾತ ಹಾಸ್ಯ ನಟ, ಕನ್ನಡದ ಹಲವು ಚಲನಚಿತ್ರಗಳಲ್ಲಿ ಅಭಿನಯಿಸಿರುವ ಟೆನಿಸ್ ಕೃಷ್ಣ ಜಿಲ್ಲೆಯ ಮೂಡಿಗೆರೆಗೆ ಭಾನುವಾರ ಭೇಟಿ ನೀಡಿದ್ದರು. 

ಧರ್ಮಸ್ಥಳಕ್ಕೆ ಭೇಟಿ ನೀಡಿದ್ದ ಅವರು ಮೂಡಿಗೆರೆ ಮಾರ್ಗವಾಗಿ ಹಿಂತಿರುಗಿ ಬರುವಾಗ ಕಾಫಿನಾಡಿನ ಬೆಟ್ಟಗುಡ್ಡಗಳ ಪ್ರಕೃತಿ ಸೌಂದರ್ಯವನ್ನು ವೀಕ್ಷಿಸುತ್ತಾ ಬಂದರು. ಮಧ್ಯಾಹ್ನ ಮೂಡಿಗೆರೆ ಪಟ್ಟಣಕ್ಕೆ ಆಗಮಿಸಿ ಶತಮಾನದಷ್ಟು ಹಳೆಯ ಮನೆಯಲ್ಲಿ ಪ್ರಾರಂಭಿಸಲಾಗಿರುವ ಖಲೀಲ್ಸ್ ಕಿಚನ್ಸ್ ಹೊಟೇಲಿಗೆ ಭೇಟಿ ನೀಡಿ ಭೋಜನ ಸವಿದರು. ಮಲೆನಾಡು-ಕರಾವಳಿ ಭಾಗದ ವಿಶೇಷ ಖಾದ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ತಲೆಗೆ ಶ್ವೇತವಸ್ತ್ರ ಕಟ್ಟಿಕೊಂಡಿದ್ದ ಟೆನಿಸ್ ಕೃಷ್ಣ ವಿಶೇಷವಾಗಿ ಎಲ್ಲರ ಗಮನ ಸೆಳೆದರು.  

ಟೆನಿಸ್ ಕೃಷ್ಣ ಹಿಂದೆ ಚಿತ್ರರಂಗದ ದೊಡ್ಡ ಸ್ಟಾರ್ ನಟರಾಗಿದ್ದ ಡಾ.ರಾಜ್ ಕುಮಾರ್, ವಿಷ್ಣುವರ್ಧನ್ ಸಹಿತ ಹಲವಾರು ನಟರ ಜೊತೆ ಹಾಸ್ಯ ನಟನಾಗಿ ಅಭಿನಯಿಸಿ ಕನ್ನಡಿಗರಿಗೆ ಚಿರಪರಿಚಿತರಾದವರು.

ಇತ್ತೀಚಿನ ಸುದ್ದಿ

ಜಾಹೀರಾತು