12:07 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು ಏರ್ ಪೋರ್ಟ್ ಶ್ವಾನ ದಳದ  ಲೀನಾ ಇನ್ನಿಲ್ಲ: ಸಕಲ ಗೌರವದೊಂದಿಗೆ ಅಂತ್ಯಕ್ರಿಯೆ 

22/11/2021, 14:54

ಮಂಗಳೂರು(reporterkarnataka.com): ಇಡೀ ಕಡಲನಗರಿ ಯನ್ನೇ ಒಂದು ದಿನ ಪೂರ್ತಿ ತುದಿಗಾಲಿನಲ್ಲಿ ನಿಲ್ಲಿಸಿದ್ದ ಮಂಗಳೂರು ವಿಮಾನ ನಿಲ್ದಾಣ ಬಾಂಬ್ ಪ್ರಕರಣವನ್ನು ಬೇಧಿಸಿದ್ದ ಕೇಂದ್ರ ಕೈಗಾರಿಕಾ ಭದ್ರತಾ ಪಡೆ(ಸಿಐ ಎಸ್ ಎಫ್)ಯ ಶ್ವಾನ ಲೀನಾ(8) ಅನಾರೋಗ್ಯದಿಂದ ಕೊನೆಯುಸಿರೆಳೆದಿದೆ. ಸಕಲ ಸೇನಾ ಗೌರವದೊಂದಿಗೆ ಮೃತ ಲೀನಾಗೆ ಅಂತ್ಯಕ್ರಿಯೆ ನೆರವೇರಿಸಲಾಗಿದೆ.


ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ಲೀನಾಳ ಅಂತ್ಯ ಸಂಸ್ಕಾರ ನಡೆಸಲಾಯಿತು. ಹೂವಿನಿಂದ ಅಲಂಕರಿಸಿದ ಪೆಟ್ಟಿಗೆಯಲ್ಲಿ ಇರಿಸಿ ಲೀನಾಳನ್ನು ತರಲಾಯಿತು.

2013 ಮೇ 5ರಂದು ಜನಿಸಿದ ಲೀನಾಗೆ ರಾಂಚಿಯಲ್ಲಿ ಸ್ಫೋಟಕ ಪತ್ತೆ ಕುರಿತು ತರಬೇತಿ ನೀಡಲಾಗಿತ್ತು. ನಂತರ ಅದನ್ನು ಮಂಗಳೂರು ವಿಮಾನ ನಿಲ್ದಾಣ ಶ್ವಾನ ದಳಕ್ಕೆ ಸೇರಿಸಲಾಯಿತು.

2020 ಜನವರಿ 12ರಂದು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆದಿತ್ಯ ರಾವ್ ಎಂಬಾತ ಇರಿಸಿದ್ದ ಬಾಂಬ್ ಅನ್ನು ಇದೇ ಲೀನಾ ಪತ್ತೆ ಹಚ್ಚಿತ್ತು. ಮಂಗಳೂರು ವಿಮಾನ ನಿಲ್ದಾಣದ ಶ್ವಾನ ದಳದಲ್ಲಿರುವ 4 ಶ್ವಾನಗಳ ಪೈಕಿ ಲೀನಾ ಅತ್ಯಂತ ಚುರುಕು ಹಾಗೂ ಸೂಕ್ಷ್ಮಗ್ರಾಹಿ ಆಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು