1:01 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ನಿರಂತರ ಮಳೆ: ಅಥಣಿಯಲ್ಲಿ ಸಾವಿರಾರು ಎಕರೆ ದ್ರಾಕ್ಷೆ ಬೆಳೆ ನಾಶ; ಆಕಾಶದತ್ತ ಮುಖ ಮಾಡಿದ ರೈತರು

25/11/2021, 15:20

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ವಾಯುಭಾರ  ಕುಸಿತದಿಂದ ರಾಜ್ಯಾದ್ಯಂತ ಒಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ರಾಜ್ಯದಲ್ಲಿ ರೈತನ ಕಷ್ಟ ಹೇಳಿ ತೀರದು.ಉತ್ತರ ಕರ್ನಟಕದಲ್ಲಿ ಮಳೆ ಏನೋ ಕಡಿಮೆ ಇದೆ, ಆದರೆ ಮೋಡ ಕವಿದ ವಾತಾವರಣದಿಂದ ವಾಣಿಜ್ಯ ಬೆಳೆ ದ್ರಾಕ್ಷಿ ಈಗ ರೋಗಕ್ಕೆ ತುತ್ತಾಗಿ ಬೆಳೆ ಸಂಪೂರ್ಣ ನಾಶವಾಗಿದೆ.


ಕೋವಿಡನಿಂದ್ ಸತತ ಎರಡು ವರ್ಷ ನಷ್ಟ ಅನುಭವಿಸಿದ ರೈತ ಈಗಲಾದರೂ ಲಾಭ ಆಗಬಹುದು ಎಂದು ರಾತ್ರಿ-ಹಗಲು ಕಷ್ಟಪಟ್ಟು ಇನ್ನೇನು ಬೆಳೆ ಚೆನ್ನಾಗಿ ಬಂತು ಅನ್ನೋವಷ್ಟರಲ್ಲಿ ಪ್ರಕೃತಿ ವಿಕೋಪಕ್ಕೆ ರೈತ ಬಲಿಪಶು ಆಗಿದ್ದಾನೆ.

ತುಂತುರು ಮಳೆಗೆ ದ್ರಾಕ್ಷಿ ಬೆಳೆ ಸಂಪೂರ್ಣ ಕೊಳೆತುಹೋಗಿವೆ. ಎಕರೆಗೆ ಸುಮಾರು ಎರಡರಿಂದ ಮೂರು ಲಕ್ಷ ರೂಪಾಯಿ ಖರ್ಚಾಗಿದ್ದು ಈಗ ಒಂದು ರೂಪಾಯಿ ಕೂಡ ನಮಗಿಲ್ಲ.  ಸೂಕ್ತ ಪರಿಹಾರ ಒದಗಿಸುವುದಾಗಿ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪುರ ಗ್ರಾಮದ ರೈತ ಪಾಂಡುರಂಗಹಬಗುಂಡೆ ಮಾಧ್ಯಮದ ಮೂಲಕ ಸರ್ಕಾರಕ್ಕೆ ಮನವಿ ಮಾಡಿದರು.

ಅಥಣಿ ತಾಲೂಕಿನ ಅನಂತಪುರ ಹೂಬಳಿ ವ್ಯಾಪ್ತಿಯಲ್ಲಿ ಸುಮಾರು 100ರಿಂದ 200 ಎಕರೆ ದ್ರಾಕ್ಷಿ ಬೆಳೆದ ರೈತರಿಗೆ ಅಪಾರ ಪ್ರಮಾಣದ ನಷ್ಟವಾಗಿದೆ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಪರಿಹಾರ ಒದಗಿಸಿ ಎಂದು ಮಾಂತೇಶ್ ಚಿಗ್ರೆ ಮನವಿ ಮಾಡಿದರು.

ಇದೇ ಸಂದರ್ಭದಲ್ಲಿ ಗ್ರಾಮದ ರೈತರಾದ ಪ್ರವೀಣ್ ಪವಾರ ಮಾತನಾಡಿ ನಾನು ಸುಮಾರು 60 ಲಕ್ಷ ಖರ್ಚು ಮಾಡಿ ದ್ರಾಕ್ಷಿ ಬೆಳೆ ಬೆಳೆದಿದ್ದೇನೆ. ಬಡ್ಡಿ ಸಹಿತ ಬಂದಿಲ್ಲ ಎಂದು ನೋವನ್ನ ಹಂಚಿಕೊಂಡರು ಏನೆ ಆಗಲಿ ನೊಂದ ರೈತರ ಕೈ ಹಿಡಿಯುತ್ತ ಸರ್ಕಾರ ಅನ್ನೋದನ್ನ ಕಾದು ನೋಡಬೇಕಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು