9:39 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಮುಂಗಾರು ಬಿತ್ತನೆಗೆ ಅನ್ನದಾತ ಸಜ್ಜು: ಬಿತ್ತನೆ ಬೀಜಕ್ಕೆ ಪ್ರಸ್ತಾವನೆ; ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಸೂಚನೆ

31/05/2021, 07:11

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ಕೋವಿಡ್ ಸಮಯದಲ್ಲೂ ಕೃಷಿ ಚಟುವಟಿಕೆ ಗ್ರಾಮೀಣ ಭಾಗದಲ್ಲಿ ಗರಿಗೆದರಿವೆ. ಮುಂಗಾರು ಹಂಗಾಮಿನ ಹೊಲಗಳನ್ನು ಹದಗೊಳಿಸು ಕಾರ್ಯ ಅದ್ಭುತವಾಗಿ ನಡೆದಿದೆ. ಬಿತ್ತನೆ ಬೀಜಗಳ ಪೂರೈಕೆಗೆ ಈಗಾಗಲೇ ಕೃಷಿ ಇಲಾಖೆ ಕಳಿಸಲಾಗಿದೆ. ಕೃಷಿ ಇಲಾಖೆ ಪ್ರಸ್ತಾವನೆ ಪ್ರಕಾರ ಬೀಜ ಪೂರೈಕೆ ಆಗಲಿದೆ. 

ಈ ನಡುವೆ ಇಂದಿನ ದರದಲ್ಲೇ ರಸಗೊಬ್ಬರ ಮಾರಾಟಕ್ಕೆ ಅಂಗಡಿ ಮಾಲೀಕರಿಗೆ ಸೂಚನೆ ನೀಡಲಾಗಿದೆ. ಜೂನ್ ಮೊದಲನೇ ವಾರ ಬರುವ ಮುಂಗಾರುನಲ್ಲೂ ಉತ್ತಮ ಮಳೆ ಆಗುವ ಲಕ್ಷಣಗಳು ಕಂಡು ಬಂದಿವೆ. ಕೊರೊನಾ ಎರಡನೆಯ ಲಾಕ್ ಡೌನ್  ರೈತರನ್ನು ಸ್ವಲ್ಪ ಕಷ್ಟಕ್ಕೆ ಸಿಲುಕಿಸಿದೆ. ರಸಗೊಬ್ಬರ ಕೊರತೆ ಉಂಟಾಗದಂತೆ ನೋಡಿಕೊಳ್ಳಬೇಕು. 

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಸೂಚಿಸಲಾಗಿದೆ. ಸಹಾಯಕ ಕೃಷಿ ನಿರ್ದೇಶಕಿ ಡಾ. ಎಸ್ ಪ್ರಿಯಾಂಕ,

ಮುಂಗಾರಿನಲ್ಲಿ ಕೃಷಿ ಚಟುವಟಿಕೆಗಳು ಬಿತ್ತನೆ ಕುರಿತು ಬೀಜಗಳನ್ನು ಪೂರೈಕೆ ಪ್ರಸ್ತಾವನೆಗೆ ಕಳಿಸಿಕೊಡಲಾಗಿದೆ.

ರಸಗೊಬ್ಬರವನ್ನು ಇಂದಿನ ದರದಲ್ಲಿ ಮಾರಾಟ ಮಾಡಲು ಅಂಗಡಿ ಮಾಲೀಕರಿಗೆ ಈಗಾಗಲೇ ಸೂಚಿಸಲಾಗಿದೆ. ಮಾರಾಟ ದರ ಪಟ್ಟಿ ಹಾಕಿ ಕೋವಿಡ್ ನಿಯಮ ಪಾಲಿಸುವಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವ ಹೇಳಲಾಗಿದೆ.

ಈ ನಡುವೆ ಮಸ್ಕಿ ಕ್ಷೇತ್ರದ ಅಂತರಗಂಗೆ, ಮೆದಿಕಿನಾಳ, ಅಂಕುಶದೊಡ್ಡಿ, ತಲೆಕಾನ್ , ಗುಡದೂರು, ಹಂಪನಾಳ, ನಾಗರಬೆಂಚಿ ಸುತ್ತಮುತ್ತಲಿನ ಗ್ರಾಮಸ್ಥರು ಮುಂಗಾರು ಬಿತ್ತನೆಗಾಗಿ ಭರ್ಜರಿ ಹೊಲಗಳ ಹದ ಮಾಡಿ ಕೆಲಸ ಮಾಡುವ ದೃಶ್ಯ ಕಂಡುಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು