7:59 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಂಕಲಿ ಮಠದ ಜಾತ್ರೋತ್ಸವ ರದ್ದು: ಮನೆಯಲ್ಲೇ ಸಂಭ್ರಮ ಆಚರಿಸಿಕೊಳ್ಳಲು ವೀರಭದ್ರ ಮಹಾಸ್ವಾಮೀಜಿ ಕರೆ

31/05/2021, 18:04

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ

info.reporterkarnataka@gmail.com

ರಾಯಚೂರು ಜಿಲ್ಲೆಯ ಸುಕ್ಷೇತ್ರ ಅಂಕಲಿ ಮಠದ ಜಾತ್ರೆ ಪ್ರತಿ ವರ್ಷದಂತೆ ಒಂದು ಮತ್ತು ಎರಡನೇ ತಾರೀಖಿನಂದು ಬಹಳ ವಿಜ್ರಂಭಣೆಯಿಂದ ನಡೆಯಬೇಕಿತ್ತು. ಆದರೆ ಕೊರೊನಾ ಹಿನ್ನೆಲೆಯಲ್ಲಿ 

ಈ ಬಾರಿ ಜಾತ್ರೆಯನ್ನು ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲೇ ಆಚರಿಸುವಂತೆ ಮಹಾ ಸ್ವಾಮೀಜಿ ಮನವಿ ಮಾಡಿದ್ದಾರೆ.

ಕೋವಿಡ್ 19 ತಡೆಗಟ್ಟಲು ಸಾಮಾಜಿಕ ಅಂತರವನ್ನು ಕಾಪಾಡುವ ನಿಟ್ಟಿನಲ್ಲಿ ಮಹಾಸ್ವಾಮೀಜಿ ವೀರಭದ್ರ ಮಹಾ ಶಿವಾಚಾರ್ಯರು ಜಾತ್ರೆ ರದ್ದು ಮಾಡಲಾಗಿದೆ. ಭಕ್ತಾದಿಗಳು ಮನೆಯಲ್ಲಿ ದೇವರನ್ನು ನೆನೆದು ಪೂಜ್ಯರನ್ನು ಸ್ಮರಿಸಿ ಹಬ್ಬ ಆಚರಿಸಿಕೊಳ್ಳಿ ಎಂದು ಸಲಹೆ ನೀಡಿದ್ದಾರೆ.

ಕೊರೊನಾ ಕುರಿತು ಸರಕಾರದ ನಿಯಮಗಳನ್ನು ಪಾಲಿಸಬೇಕು, ಸಾಮಾಜಿಕ ಅಂತರ ಕಾಪಾಡುವುದರ ಜತೆ ಮುಖಕ್ಕೆ ಮಾಸ್ಕ್ ಧರಿಸಿ ನಿಮ್ಮ ಜೀವನವನ್ನು ರಕ್ಷಿಸಿಕೊಳ್ಳಿ ಎಂದು ಮಹಾಸ್ವಾಮೀಜಿ ಭಕ್ತ ಜನತೆಯಲ್ಲಿ ವಿನಂತಿ ಮಾಡಿಕೊಂಡಿದ್ದಾರೆ.ಸುಕ್ಷೇತ್ರ ಅಂಕಲಿ ಮಠ ಕರ್ನಾಟಕದಲ್ಲಿ 

ಬಹಳಷ್ಟು ಪ್ರಖ್ಯಾತಿ ಹೊಂದಿರುವ ಕ್ಷೇತ್ರವಾಗಿದೆ. ಪೂಜ್ಯ ನಿರುಪಾದಿ ಮಹಾಸ್ವಾಮಿಗಳು, ಅಡವಿ ಸಿದ್ದರು ಮಹಾಸ್ವಾಮಿಗಳು ಮಠಕ್ಕಾಗಿ ತಮ್ಮ ಜೀವನವನ್ನೇ ಮುಡುಪಾಗಿಟ್ಟಿದ್ದರು. ಪ್ರತಿವರ್ಷವೂ ಮಹಾರಾಷ್ಟ್ರ, ಆಂಧ್ರ ಹಾಗೂ ಹೊರ ದೇಶಗಳಿಂದ ಭಕ್ತರು ದೇವರ ಹಾಗೂ ಗುರುವಿನ ದರ್ಶನಕ್ಕೆ ಆಗಮಿಸುತ್ತಿದ್ದರು. ಆದರೆ ಈ ಬಾರಿ ಎಲ್ಲವೂ ಭಣಭ಼ಣ.

ಇತ್ತೀಚಿನ ಸುದ್ದಿ

ಜಾಹೀರಾತು