3:46 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮಂಗಳೂರು: ಶ್ರೀ ವೀರವೆಂಕಟೇಶ ದೇವರ ಪಾಕ ಶಾಲೆ ನವೀಕೃತ ‘ಅನ್ನಪೂರ್ಣೆ’ ಉದ್ಘಾಟನೆ        

13/12/2021, 20:26

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com) : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರಿಂದ ನೆರವೇರಿತು.

ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ ಮೊಕ್ಕಾಂ ನಿಂದ ಆಗಮಿಸಿದ್ದು, ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು. ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ ಜನವರಿ ೨೫ ರಂದು ನಡೆಯಲಿರುವ ಶ್ರೀ ದೇವರ ಪುನಃ ಪ್ರತಿಷ್ಠಾ ದಶಮಾನೋತ್ಸವ ಹಾಗೂ ನೂತನ ಬ್ರಹ್ಮ ರಥ ಸಮರ್ಪಣೆ ನಡೆಯಲಿರುವುದರಿಂದ ಶ್ರೀಗಳವರಿಂದ ಪ್ರಾರ್ಥನೆ ನಡೆದು ಪ್ರಸಾದ ನೀಡಿದರು. ನಂತರ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ )ಯ ಉದ್ಘಾಟನಾ ಸಮಾರಂಭ ಶ್ರೀಗಳವರಿಂದ ದೀಪ ಪ್ರಜ್ವಲನೆಯ ಮುಖೇನ ವಿಧ್ಯುಕ್ತವಾಗಿ ಉದ್ಘಾಟನೆಗೊಂಡಿತು . ಈ ಸಂದರ್ಭದಲ್ಲಿ ದೇವಳದ ಮೊಕ್ತೇಸರರಾದ ಸಿ ಎಲ್ ಶೆಣೈ , ಕೆ ಪಿ ಪ್ರಶಾಂತ್ ರಾವ್ , ರಾಮಚಂದ್ರ ಕಾಮತ್ , ತಂತ್ರಿಗಳಾದ ಪಂಡಿತ್ ನರಸಿಂಹ ಆಚಾರ್ಯ , ಕೊಡುಗೈ ದಾನಿ ರಾಮದಾಸ್ ಕಾಮತ್ , ವೆಂಕಟೇಶ್ ಪೈ ಹಾಗೂ ಸಾವಿರಾರು ಭಜಕರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು