8:03 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಮೇಕೆ ಭಕ್ಷಕ ಹೆಣ್ಣು ಹುಲಿ ಕೊನೆಗೂ ಸೆರೆ: ಮೈಸೂರು ಮೃಗಾಲಯಕ್ಕೆ ರವಾನೆ; ನಿಟ್ಟುಸಿರು ಬಿಟ್ಟ ನಾಣಚ್ಚಿ ಹಾಡಿ ನಾಗರಿಕರು

17/12/2021, 18:43

ಸಾಂದರ್ಭಿಕ ಚಿತ್ರ
ನಾಗರಹೊಳೆಗೆ(reporterkarnataka.com) ನಾಣಚ್ಚಿ ಹಾಡಿ ವ್ಯಾಪ್ತಿಯಲ್ಲಿ ಮೇಯಲು ಬಿಟ್ಟಿದ್ದ 9 ಮೇಕೆಗಳನ್ನು ಬಲಿ ತೆಗೆದುಕೊಂಡಿದ್ದ ಹುಲಿಯನ್ನು ಕೊನೆಗೂ ಸೆರೆ ಹಿಡಿಯಲಾಗಿದೆ.

ಹುಲಿ ಮೇಕೆಗಳನ್ನು ಕೊಂದಿರುವುದಲ್ಲದೆ, ಮೇಕೆ ಮೇಯಿಸುತ್ತಿದ್ದ ವ್ಯಕ್ತಿಯ ಮೇಲೂ ದಾಳಿ ನಡೆಸಿತ್ತು. ಇದರಿಂದ ಭಯಭೀತರಾದ ಗ್ರಾಮಸ್ಥರ. ಹುಲಿಯನ್ನು ಸೆರೆಹಿಡಿಯುವಂತೆ ಒತ್ತಾಯಿಸಿ, ನಾಗರಹೊಳೆ ಅರಣ್ಯ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ್ದರು. ಗ್ರಾಮಸ್ಥರ ಪ್ರತಿಭಟನೆ ಹಿನ್ನಲೆಯಲ್ಲಿ ಸಾಕಾನೆಗಳ ಸಹಕಾರದಿಂದ ಅರಣ್ಯ ಇಲಾಖೆಯು ಗುರುವಾರ ಸಂಜೆ ಹುಲಿ ಸೆರೆಗೆ ಕಾರ್ಯಾಚರಣೆ. ನಡೆಸಿತ್ತು. 

ಮತ್ತಿಗೋಡು ಶಿಬಿರದ ಅಭಿಮನ್ಯು, ಭೀಮ ಸೇರಿದಂತೆ ಸಾಕಾನೆಗಳ ಮೂಲಕ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಆಡುಗಳನ್ನು ಬಲಿ ತೆಗೆದುಕೊಂಡಿದ್ದ ಸ್ಥಳದಲ್ಲೇ ಅಡಗಿದ್ದ ಹುಲಿಯನ್ನು ತಜ್ಞರ ನೆರವಿನಿಂದ ಅರಿವಳಿಕೆ ನೀಡಿ ಸೆರೆಹಿಡಿದರು. 

ಸೆರೆಸಿಕ್ಕ ಹೆಣ್ಣು ಹುಲಿ ಅಂದಾಜು 10 ವಷ೯ ಪ್ರಾಯದ್ದಾಗಿದೆ. 
ವ್ಯಾಘ್ರ ಸೆರೆಯಾದ ಹಿನ್ನಲೆಯಲ್ಲಿ ನಾಣಚ್ಚಿ ಹಾಡಿ ವ್ಯಾಪ್ತಿಯ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದು ಸೆರೆಹಿಡಿಯಲಾದ ಹುಲಿಯನ್ನು ಮೈಸೂರು ಮೖಗಾಲಯಕ್ಕೆ ಸಾಗಿಸಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು