7:31 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಗೋಣಮಾಕನಹಳ್ಳ: ಹೆಣ್ಣಿನ ವಿಷಯದಲ್ಲಿ ನಡೆದ ಕೊಲೆ ಪ್ರಕರಣ; 3 ಮಂದಿ ಆರೋಪಿಗಳ ಬಂಧನ

19/12/2021, 09:48

ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ ಕೋಲಾರ

info.reporterkarnataka@gmail.com

ಕೆಜಿಎಫ್ ಪೊಲೀಸ್‌ ಜಿಲ್ಲೆಯ ಆಂಡಸನ್‌ಪೇಟೆ ಪೊಲೀಸ್ ಠಾಣಾ ಸರಹದ್ದಿನಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಡಿ .17ರಂದು ಮಧ್ಯಾಹ್ನ ಹೆಣ್ಣಿನ ವಿಷಯದಲ್ಲಿ ಆದ ಗಲಾಟೆಯ ಹಿನ್ನೆಲೆಯಲ್ಲಿ ಕೊಲೆ ನಡೆದಿತ್ತು.

ಪ್ರಕರಣಕ್ಕೆ ಸಂಬಂಧಿಸಿದ ಮೂವರು ಆರೋಪಿಗಳಲ್ಲಿ ಬಂಧಿಸುವಲ್ಲಿ ಸ್ಥಳೀಯ ವಿಶೇಷ ಅಪರಾಧ ಪತ್ತೆ ದಳದ ಪೊಲೀಸರು ಯಶಸ್ವಿಯಾಗಿದ್ದಾರೆಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್‌ ಬಾಬು ಅವರು ತಿಳಿಸಿದ್ದಾರೆ. 

ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆಂಡಸನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ಗೋಣಮಾಕನಹಳ್ಳಿಯ ನಿವಾಸಿ ಗಜೇಂದ್ರನಾಯ್ಡು ಅವರು ತನ್ನ ಮನೆಯ ಬಳಿ ಡಿ .17 ರಂದು ಮದ್ಯಾಹ್ನ 2.30 ರ ಸುಮಾರಿನಲ್ಲಿ ಬರುತ್ತಿರುವಾಗ , ಅದೇ ಗ್ರಾಮ ಗೋಣಮಾಕನಹಳ್ಳಿಯ ನಿವಾಸಿಗಳಾದ ರಾಘವೇಂದ್ರ ( 22  ) , ಹರೀಶ್ ( 23 )  ಹಾಗೂ ಜಿ.ಮಂಜುನಾಥ ( 21 )  ಅವರುಗಳು ಒಂದು ಹೆಣ್ಣಿನ ವಿಷಯದಲ್ಲಿ ಗಜೇಂದ್ರನಾಯ್ಡು ಸ್ವಾಮಿ ಅವರನ್ನು ಅಡ್ಡಗಟ್ಟಿ ದಾಳಿ ಮಾಡಿ ಗ್ರಾಮದ ಜಯರಾಮ್  ಅವರ ನೀಲಗಿರಿ ತೋಪಿಗೆ ಕರೆದುಕೊಂಡೋಗಿ ಚಾಕುಗಳಿಂದ ಕುತ್ತಿಗೆ ಕೋಯ್ದು , ಚೆನ್ನಾಗಿ ಹೊಡೆದು ಕೊಲೆ ಮಾಡಿ ಸಾಯಿಸಿದ್ದರು ಎಂದು ಆರೋಪಿಸಲಾಗಿದೆ.


ಜಿಲ್ಲಾ ರಕ್ಷಣಾಧಿಕಾರಿ ಡೆಕ್ಕಾ ಕಿಶೋರ್ ಬಾಬು ಮಾರ್ಗದರ್ಶನದಲ್ಲಿ , ಡಿವೈಎಸ್ಪಿ ಪಿ.ಮುರಳೀಧರ ಅವರ ನೇತೃತ್ವದಲ್ಲಿ ರಚಿಸಲಾಗಿದ್ದ ವಿಶೇಷ ಅಪರಾಧ ಪತ್ತೆ ತಂಡದ ರಾಬರ್ಟ್‌ಸನ್‌ಪೇಟೆ ಸಿಪಿಐ ಕೆ.ನಾಗರಾಜ್ , ಸಿಬ್ಬಂದಿಗಳಾದ ಮ್ಯಾಥ್ಯ ಅಲೆಕ್ಸಾಂಡರ್ , ನಾರಾಯಣಸ್ವಾಮಿ , ಟಿ.ಶಿವಯ್ಯ ಗಜೇಂದ್ರ , ಗೋಪಾಲಕೃಷ್ಣ , ಮಧುಸೂಧನ್ , ರಾಜೇಶ್‌ಬಾಬು , ಸುನಿಲ್ , ಮಹೇಂದ್ರ , ರಘು , ಮುರಳಿ , ಎಸ್.ಗಜೇಂದ್ರ , ಚಂದ್ರಕುಮಾರ್ , ಪ್ರಭಾಕರ್ , ಸತ್ಯಪ್ರಕಾಶ್ ಅವರುಗಳು ತೀವ್ರ ಕಾರ್ಯಾಚರಣೆ ನಡೆಸಿ , ಕೊಲೆ ಪ್ರಕರಣದ ಆರೋಪಿಗಳು ರಾಘವೇಂದ್ರ , ಹರೀಶ್ , ಮಂಜುನಾಥ ರವರುಗಳನ್ನು ಆಂದಪದೇಶದ ಶಾಂತಿಪುರಂನಲ್ಲಿ ಡಿ .18 ರಂದು ಪೊಲೀಸರು ಬಂಧಿಸಿ , ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಡೆಕ್ನಾ ಕಿಶೋರ್ ಬಾಬು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು