9:43 AM Friday7 - November 2025
ಬ್ರೇಕಿಂಗ್ ನ್ಯೂಸ್
ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್…

ಇತ್ತೀಚಿನ ಸುದ್ದಿ

ಐತಿಹಾಸಿಕ ಗುಜ್ಜರಕೆರೆ ಅತಿಕ್ರಮಣ ತೆರವಿಗೆ ಶೀಘ್ರದಲ್ಲೇ ಸರ್ವೆ: ಮೇಯರ್ ಪ್ರೇಮಾನಂದ ಶೆಟ್ಟಿ ಭರವಸೆ

02/06/2021, 06:52

ಮಂಗಳೂರು(reporterkarnataka news): ಸ್ಮಾರ್ಟ್ ಸಿಟಿ ಯೋಜನೆಯಡಿ ನಡೆಯುತ್ತಿರುವ ಗುಜ್ಜರಕೆರೆ ಅಭಿವೃದ್ಧಿ  ಕಾಮಗಾರಿಗಳ ಪ್ರಗತಿ ಪರಿಶೀಲನೆಯನ್ನು  ಮೇಯರ್ ಪ್ರೇಮಾನಂದ ಶೆಟ್ಟಿ ಅವರು ನಡೆಸಿದರು.

ಈ ಸಂದರ್ಭ ಕೆರೆಯ ಭೂ ಅತಿಕ್ರಮಣ, ಕೆರೆಯ ಸುತ್ತಲು ಅಗತ್ಯಕ್ಕಿಂತ ಅಗಲ ಮಣ್ಣು ಹಾಕಿ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಿರುವ ಕುರಿತು ಸ್ಥಳೀಯರು ಮೇಯರ್  ಗಮನಕ್ಕೆ ತಂದರು. ಈ ಬಗ್ಗೆ ಎಂಜಿನಿಯರ್ ಅವರಿಂದ ಮಾಹಿತಿ ಪಡೆದ ಮೇಯರ್ ಅವರು  ಆದಷ್ಟು ಶೀಘ್ರದಲ್ಲಿ ಕೆರೆಯ ಜಮೀನು ಸರ್ವೇ ಕಾರ್ಯ ನಡೆಸುವ ಕುರಿತಾಗಿ ಸ್ಥಳೀಯರಿಗೆ ಭರವಸೆ ನೀಡಿದರು.

ಈ ಸಂದರ್ಭ ಸ್ಥಳೀಯ ಕಾರ್ಪೊರೇಟರ್ ಭಾನುಮತಿ ಪಿ.ಎಸ್. , ಗುಜ್ಜರಕೆರೆ ತೀರ್ಥ ಸಂರಕ್ಷಣಾ ವೇದಿಕೆಯ ಅಧ್ಯಕ್ಷ ಯೋಗೀಶ್ ಕುಮಾರ್ ಜೆಪ್ಪು, ಪ್ರಧಾನ ಕಾರ್ಯದರ್ಶಿ ಪಿ. ನೇಮು ಕೊಟ್ಟಾರಿ ಗುಜ್ಜರಕೆರೆ ಹಾಗೂ ಸ್ಥಳೀಯರಾದ  ಮಾಧವ ಗುಜ್ಜರಕೆರೆ ,  ಉದಯ ಶಂಕರ್ ಇನ್ನಿತರರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು