3:47 AM Thursday6 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಕುಕ್ಕೆ ಸುಬ್ರಹ್ಮಣ್ಯ ದೇಗುಲಕ್ಕೆ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಅಬ್ದುಲ್ ನಝೀರ್ ಭೇಟಿ: ಆಶ್ಲೇಷ ಪೂಜೆ ಸಲ್ಲಿಕೆ

27/12/2021, 18:24

ಸುಬ್ರಹ್ಮಣ್ಯ(reporterkarnataka.com):

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯಕ್ಕೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳಾದ  ಜಸ್ಟಿಸ್ ಅಬ್ದುಲ್ ನಝೀರ್  ಅವರು ಕುಟುಂಬ ಸಮೇತರಾಗಿ ಬಂದು ಆಶ್ಲೇಷ ಬಲಿ ಪೂಜೆಯನ್ನು
ಸಲ್ಲಿಸಿದರು.

ನ್ಯಾಯಮೂರ್ತಿ ಅಬ್ದುಲ್ ನಜೀರ್ ಅವರು ಡಿ.26ರ ರಾತ್ರಿ 8.10ಕ್ಕೆ ವಿಮಾನದ ಮೂಲಕ ಹೈದರಾಬಾದ್‌ನಿಂದ  ಮಂಗಳೂರಿಗೆ ಆಗಮಿಸಿದ್ದರು. ನಂತರ ಅವರು ಕುಕ್ಕೆ ಸುಬ್ರಮಣ್ಯಕ್ಕೆ ತೆರಳಿ, ವಾಸ್ತವ್ಯ ಹೂಡಿದ್ದರು. 27ರಂದು ಕುಕ್ಕೆ ದೇಗುಲದಲ್ಲಿ ಆಶ್ಲೇಷ ಬಲಿ ಪೂಜೆ ಸಲ್ಲಿಸಿದರು.

ಡಿ.28ರ ಬೆಳಿಗ್ಗೆ 9 ಗಂಟೆಗೆ ನ್ಯಾಯಮೂರ್ತಿ ಅವರು

ಕುಕ್ಕೆ ಸುಬ್ರಮಣ್ಯದಿಂದ 10.30ಕ್ಕೆ ಪುತ್ತೂರಿಗೆ ಆಗಮಿಸಿ, 11 ಗಂಟೆಗೆ ಬಾರ್ ಅಸೋಸಿಯೇಷನ್‌ನ ಕಟ್ಟಡವನ್ನು ಉದ್ಘಾಟಿಸುವರು. ಅಲ್ಲಿನ ಕೋರ್ಟ್ ಕಟ್ಟಡದ ಎರಡನೇ ಹಂತದ ಕಟ್ಟಡ ಹಾಗೂ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ಕ್ವಾರ್ಟಸ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು.

ಮಧ್ಯಾಹ್ನ 1.15ಕ್ಕೆ ಪುತ್ತೂರಿನಿಂದ ಹೊರಟು 2.15ಕ್ಕೆ ಸುಳ್ಯಕ್ಕೆ ಆಗಮಿಸುವರು. ಮಧ್ಯಾಹ್ನ 2.30ಕ್ಕೆ ಅಲ್ಲಿ ನ್ಯಾಯಾಂಗ ಇಲಾಖೆಯ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಸಂಜೆ 4.45ಕ್ಕೆ ಬೆಳ್ತಂಗಡಿಗೆ ಆಗಮಿಸುವ ಅವರು ಅಲ್ಲಿ 5 ಗಂಟೆಗೆ ಬಾರ್ ಅಸೋಸಿಯೇಷನ್ ಕಟ್ಟಡವನ್ನು ಉದ್ಘಾಟಿಸುವರು. ಸಂಜೆ 6 ಗಂಟೆಗೆ ಬೆಳ್ತಂಗಡಿಯಿಂದ ನಿರ್ಗಮಿಸಿ ರಾತ್ರಿ 7.30ಕ್ಕೆ ಮೂಡುಬಿದ್ರಿಗೆ ಆಗಮಿಸಿ ಅವರು ಸ್ವಗೃಹದಲ್ಲಿ ವಾಸ್ತವ್ಯ ಮಾಡುವರು. 
ಡಿ.29ರ ಬುಧವಾರ ಬೆಳಿಗ್ಗೆ 8 ಗಂಟೆಗೆ ಮೂಡಬಿದ್ರೆಯಿಂದ ನಿರ್ಗಮಿಸಿ 8.45ಕ್ಕೆ ಮಂಗಳೂರಿಗೆ ಆಗಮಿಸುವ ಅವರು ಬೆಳಿಗ್ಗೆ 9ಕ್ಕೆ ನ್ಯಾಯಾಂಗ ಇಲಾಖೆ ಅಧಿಕಾರಿಗಳ ಕ್ವಾರ್ಟಸ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. 11ಕ್ಕೆ ಬಂಟ್ವಾಳಕ್ಕೆ ಆಗಮಿಸುವ ಅವರು 11.15ಕ್ಕೆ ಬಂಟ್ವಾಳದಲ್ಲಿ ನ್ಯಾಯಾಂಗ ಇಲಾಖೆ ಅಧಿಕಾರಿಗಳ ವಸತಿ ಗೃಹಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುವರು. ಅಲ್ಲಿಂದ ಅವರು 1.45ಕ್ಕೆ ಮೂಡಬಿದ್ರಿಗೆ ಆಗಮಿಸಿ ಅವರ ಸ್ವಗೃಹದಲ್ಲಿ ವಾಸ್ತವ್ಯ ಮಾಡುವರು. 
ಡಿ.30ರ ಗುರುವಾರ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ಮೂಡಬಿದ್ರಿಯ ಆಳ್ವಾಸ್ ಕಾಲೇಜಿನಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವರು. 
2022ರ ಜನವರಿ 1ರ ಬೆಳಿಗ್ಗೆ 11.25ಕ್ಕೆ ಮಂಗಳೂರಿನಿಂದ ವಿಮಾನದ ಮೂಲಕ ಬೆಂಗಳೂರಿಗೆ ತೆರಳುವರು. 

ಇತ್ತೀಚಿನ ಸುದ್ದಿ

ಜಾಹೀರಾತು