9:56 PM Friday7 - November 2025
ಬ್ರೇಕಿಂಗ್ ನ್ಯೂಸ್
ಯುವಕನ ಅನುಮಾನಾಸ್ಪದ ಸಾವು : ರಾಷ್ಟ್ರೀಯ ಹೆದ್ದಾರಿಯಲ್ಲಿ ಮೃತದೇಹ ಇಟ್ಟು ಪ್ರತಿಭಟನೆ ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರ, ಸಹಾಯಕಿಯರ ಗ್ರ್ಯಾಚುಟಿ ಸಮಸ್ಯೆ ಇತ್ಯರ್ಥ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್… ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:…

ಇತ್ತೀಚಿನ ಸುದ್ದಿ

ನೈಟ್ ಕರ್ಫ್ಯೂ ಎಫೆಕ್ಟ್: ರಾಜಧಾನಿ ಬೆಂಗಳೂರು ಸ್ತಬ್ಧ; ಪೊಲೀಸ್ ಕಂಟ್ರೋಲ್ ನಲ್ಲಿ ಸಿಲಿಕಾನ್ ಸಿಟಿ

29/12/2021, 16:57

ಬೆಂಗಳೂರು(reporterkarnataka.com): ಒಮಿಕ್ರಾನ್ ನಿಯಂತ್ರಿಸಲು ರಾಜ್ಯದೆಲ್ಲೆಡೆ ನಿನ್ನೆಯಿಂದ ನೈಟ್ ಕರ್ಫ್ಯೂ ಜಾರಿಯಾಗಿದ್ದು, ರಾಜಧಾನಿ ಬೆಂಗಳೂರು 10 ಗಂಟೆ ನಂತರ ಸಂಪೂರ್ಣ ಸ್ತಬ್ಧವಾಗಿತ್ತು. ಸಿಲಿಕಾನ್ ಸಿಟಿ ಪೊಲೀಸರು ನಗರದ ಮೇಲೆ ಸಂಪೂರ್ಣ ಹಿಡಿತ ಸಾಧಿಸಿದ್ದು, ಅನಗತ್ಯವಾದ ಓಡಾಟಕ್ಕೆ ಬ್ರೇಕ್ ಹಾಕಿದ್ದಾರೆ. 

ನೈಟ್ ಕರ್ಫ್ಯೂ ಮೊದಲ ದಿನ ಪೊಲೀಸರು ಸ್ಟ್ರಿಕ್ಟ್ ಇರುವುದರಿಲ್ಲ ಎಂದು ಅನಗತ್ಯವಾಗಿ ರೋಡಿಗಿಳಿದವರ ಬಳಿ ಪೊಲೀಸರು ಫೈನ್ ಕಟ್ಟಿಸಿಕೊಂಡಿದ್ದಾರೆ.

ಅಗತ್ಯ ಸೇವೆಗಳನ್ನು ಹೊರತುಪಡಿಸಿ ನಿನ್ನೆ ಯಾವುದೇ ಸೇವೆಗಳು ಲಭ್ಯವಿರಲಿಲ್ಲ.10 ರ ಒಳಗೆ ಎಲ್ಲ ಅಂಗಡಿ ಮುಂಗಟ್ಟುಗಳು ಬಾಗಿಲು ಮುಚ್ಚಿದ್ದವು. ಹೆಚ್ಚಿನ ಸಂಖ್ಯೆಯಲ್ಲೇ ಪೊಲೀಸರು ಕರ್ತವ್ಯ ನಿರ್ವಹಿಸಿದ್ದು, ಸಂಪೂರ್ಣ ನಿಯಮ ಪಾಲನೆಯಾಗಿದೆ.

10 ಗಂಟೆ ಒಳಗೆ ಮನೆ ಸೇರಲು ಜನ ಬಸ್, ಆಟೋ ಹಾಗೂ ಕ್ಯಾಬ್‌ಗಳಿಗಾಗಿ ಪರದಾಡುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. 10  ಗಂಟೆಯ ಮೇಲೂ ಸದಾ ಜನಜಂಗುಳಿ ತುಂಬಿರುವ ಬೆಂಗಳೂರು ನಿನ್ನೆ ನಿಶ್ಯಬ್ಧವಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು